ಆ್ಯಪ್ನಗರ

ಶಾಕಿಂಗ್ ನ್ಯೂಸ್‌; ಬಂಟ್ವಾಳದಲ್ಲಿ ಅಪ್ರಾಪ್ತ ಬಾಲಕಿಯನ್ನು ಕಿಡ್ನ್ಯಾಪ್‌ ಮಾಡಿ ಗ್ಯಾಂಗ್‌ರೇಪ್‌! ದೂರು ದಾಖಲು

ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಬೆಳಗ್ಗೆ ಸಂತ್ರಸ್ತ ಬಾಲಕಿಯನ್ನು ಅಪಹರಿಸಿ ಕೃತ್ಯ ಎಸಗಿರುವ ಕಾಮುಕರು ಬಳಿಕ ಆಕೆಯನ್ನು ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Karnataka Web 9 Oct 2021, 1:13 pm
ಮಂಗಳೂರು: ಕೆಲ ವಾರಗಳ ಹಿಂದೆ ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಭೀಕರತೆ ಇನ್ನೂ ನೆನಪಲ್ಲಿರುವಾಗಲೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್‌ರೇಪ್‌ ನಡೆದಿರುವ ಆತಂಕಕಾರಿ ಘಟನೆ ವರದಿಯಾಗಿದೆ.
Vijaya Karnataka Web Bihar: 25-year-old gang-raped in Bhagalpur
Picture for representational purpose only.


ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಈ ನಾಚಿಕೆಗೇಡಿನ ಕೃತ್ಯ ನಡೆದಿದ್ದು, ಬಂಟ್ವಾಳ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಅಪಹರಿಸಿದ ಕಾಮುಕರ ತಂಡವೊಂದು ಆಕೆಯ ಮೇಲೆ ಅತ್ಯಾಚಾರ ಎಸಗಿದೆ ಎಂದು ದೂರು ದಾಖಲಾಗಿದೆ. ಫಟನೆ ಸಂಬಂಧ ಫೋಕ್ಸೋ ಪ್ರಕರಣ ದಾಖಲಿಸಿರುವ ಬಂಟ್ವಾಳ ನಗರ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಮಂಗಳೂರಿನ ಪಿಎಚ್‌ಡಿ ವಿದ್ಯಾರ್ಥಿನಿಗೆ ಪ್ರಾಧ್ಯಾಪಕನಿಂದ ಕಿರುಕುಳ; ಆರೋಪಿಯ ಬಂಧನ
ಒಂದಕ್ಕಿಂತ ಹೆಚ್ಚು ಮಂದಿ ಇದ್ದ ಆರೋಪಿಗಳು ಬಾಲಕಿಯನ್ನು ಅಪಹರಿಸಿ ಆಕೆಗೆ ಅರಿವಿಲ್ಲದಂತೆ ಮತ್ತು ಬರಿಸಿ ಹೇಯ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತು ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಬೆಳಗ್ಗೆ ಸಂತ್ರಸ್ತ ಬಾಲಕಿಯನ್ನು ಅಪಹರಿಸಿ ಕೃತ್ಯ ಎಸಗಿರುವ ಕಾಮುಕರು ಬಳಿಕ ಆಕೆಯನ್ನು ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಳಿ ಬಿಟ್ಟು ಪರಾರಿಯಾಗಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ವಿಸ್ತೃತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.
ಹಿಂದೂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆ; 10 ಜನರನ್ನು ಬಂಧಿಸಿದ ಬೆಳಗಾವಿ ಪೊಲೀಸರು
ಮೈಸೂರಿನಲ್ಲೂ ನಡೆದಿತ್ತು ಗ್ಯಾಂಗ್‌ರೇಪ್‌!ಕಳೆದ ಆಗಸ್ಟ್ ತಿಂಗಳ ಕೊನೆಯ ವಾರ ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸಂಜೆ ಆರರ ವೇಳೆ ವೈದ್ಯಕೀಯ ವಿದ್ಯಾರ್ಥಿನಿ ತನ್ನ ಗೆಳೆಯನ ಜೊತೆ ವಾಕಿಂಗ್ ಹೋಗುತ್ತಿದ್ದ ಸಮಯದಲ್ಲಿ ಅಲ್ಲೇ ಇದ್ದ ಐದಾರು ಜನ ಕಾಮುಕರು ಆಕೆಯ ಗೆಳೆಯನಿಗೆ ಹಲ್ಲೆ ಮಾಡಿ ಯುವತಿಯನ್ನು ಪೊದೆಗೆ ಕರೆದೊಯ್ದು ಗ್ಯಾಂಗ್ ರೇಪ್ ಮಾಡಿದ್ದರು. ಬಳಿಕ ದುಷ್ಕರ್ಮಿಗಳು ಯುವಕ ಯುವತಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದರು. ಕೃತ್ಯದಿಂದ ಗಂಭೀರ ಗಾಯಗೊಂಡಿದ್ದ ಯುವತಿ ಮಾನಸಿಕವಾಗಿ ಕುಗ್ಗಿದ್ದಳು. ತೀವ್ರ ಘಾಸಿಗೊಳಗಾಗಿದ್ದ ಯುವತಿ ಘಟನೆ ಬಗ್ಗೆ ಪೊಲೀಸರಿಗೆ ಹೇಳಿಕೆ ನೀಡಲಾರದಷ್ಟು ಭೀತಿಗೊಂಡಿದ್ದಳು. ಕಾಮುಕರ ಈ ಕೃತ್ಯದಿಂದ ರಾಜ್ಯ ಮತ್ತು ಇಡೀ ನಾಗರಿಕ ಸಮಾಜಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿ ತಲೆತಗ್ಗಿಸುವಂತಾಗಿತ್ತು. ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ