ಆ್ಯಪ್ನಗರ

ಜಮೀರ್ ಅಹಮದ್‌ ಮೇಲೆ ಗೂಂಡಾ ಕಾಯಿದೆ ಹಾಕಿ ಜೈಲಿಗಟ್ಟಿ: ನಳಿನ್‌ ಕುಮಾರ್‌ ಕಟೀಲ್‌

ಅಧಿಕಾರಿಗಳನ್ನು ಹೆದರಿಸಿ ತಮ್ಮ ಒಪ್ಪಿಗೆ ಪಡೆದೇ ಬರಬೇಕೆಂಬ ಅವರ ವಾದ ಸರ್ವಾಧಿಕಾರಿ ಮನೋಭಾವದ್ದು. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ತಿಳಿಸಿದರು.

Vijaya Karnataka Web 21 Apr 2020, 4:44 pm
ಮಂಗಳೂರು: ಪಾದರಾಯನಪುರದಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕ ಜಮೀರ್ ಅಹಮ್ಮದ್ ವಿರುದ್ಧ ಗೂಂಡಾ ಕಾಯಿದೆ ಜಾರಿಗೊಳಿಸಿ ಜೈಲಿಗಟ್ಟಬೇಕು. ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದರು.
Vijaya Karnataka Web ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌


ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿದರು.

ಜಮೀರ್ ಅವರು ಈ ಹಿಂದೆಯೂ ಗೂಂಡಾ ವರ್ತನೆ ತೋರಿಸಿದ್ದಾರೆ. ಅವರ ಮೇಲೆ ಗೂಂಡಾ ಕಾಯಿದೆ ಹಾಕುವಂತೆ ಮುಖ್ಯಮಂತ್ರಿಗೆ ಮನವಿ ಮಾಡುತ್ತೇನೆ. ಅದೇ ರೀತಿ ಕಾಂಗ್ರೆಸ್ ಪಕ್ಷ ಅವರನ್ನು ಉಚ್ಚಾಟಿಸಬೇಕು ಎಂದರು.

ಜಮೀರ್ ಕ್ಷೇತ್ರದಲ್ಲಿ ವೀಸಾ ಅವಧಿ ಮುಗಿದ 14 ಮಂದಿ ಇದ್ದಾರೆ. ಅವರಿಗೆಲ್ಲ ಜಮೀರ್ ರಕ್ಷಣೆ ನೀಡುತ್ತಿದ್ದಾರೆಯೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಶಾಸಕರಾದ ಅವರ ನಡೆ ಹಾಗೂ ವರ್ತನೆ ಕಾನೂನು ಬಾಹಿರವಾದದ್ದು ಎಂದು ಅರೋಪಿಸಿದರು.

ಅಧಿಕಾರಿಗಳನ್ನು ಹೆದರಿಸಿ ತಮ್ಮ ಒಪ್ಪಿಗೆ ಪಡೆದೇ ಬರಬೇಕೆಂಬ ಅವರ ವಾದ ಸರ್ವಾಧಿಕಾರಿ ಮನೋಭಾವದ್ದು. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಳಿನ್‌ ಕುಮಾರ್ ಕಟೀಲ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ