ಆ್ಯಪ್ನಗರ

ವಿಹಿಂಪ ನಾಯಕನ ಮನೆಗೆ ನುಗ್ಗಿದ 9 ದರೋಡೆಕೋರರು..! ಪತಿ, ಪತ್ನಿಗೆ ಹಲ್ಲೆ ನಡೆಸಿ ಚಿನ್ನಾಭರಣ ಜೊತೆ ಪರಾರಿ..!

ಡಕಾಯಿತರು ತೆರಳುತ್ತಲೆ ಮನೆಯವರು ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ. ಸ್ಥಳೀಯವಾಗಿ ವಿಶ್ವಹಿಂದೂ ಪರಿಷತ್‌ನ ಕೊಕ್ಕಡ ವಲಯ ಅಧ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಈ ದರೋಡೆ ಕೋರರು ನುಗ್ಗಿದ ವಿಷಯ ತಿಳಿಯುತ್ತಲೆ ನೂರಾರು ಮಂದಿ ಆಗಮಿಸಿದ್ದಾರೆ.

Vijaya Karnataka Web 21 Dec 2020, 9:10 am
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡ ನುಗ್ಗಿ ಮನೆಯ ಯಜಮಾನ ಮತ್ತು ಅವರ‌ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯದ ನಗ ನಗದು ದೋಚಿದ ಘಟನೆ ಸೋಮವಾರ ನಸುಕಿನ ಜಾವ ನಡೆದಿದೆ.
Vijaya Karnataka Web robbery in mangaluru


ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ಒಂಭತ್ತು ಮಂದಿ ಇದ್ದ ದರೋಡೆಕೋರರ ತಂಡ ಮನೆಯವರನ್ನು ಸ್ಥಳದಲ್ಲೆ ಕೂಡಿ ಹಾಕಿ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಪರಿಣಾಮ ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರ‌ನ್ನ ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಪುತ್ರಿಯೂ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಅರ್ಹಳು; ಹೈಕೋರ್ಟ್

ಮನೆಯಲ್ಲಿ ಪತಿ , ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಈ ಸಂದರ್ಭದಲ್ಲಿ ಇದ್ದುದರಿಂದ ಇವರನ್ನೆಲ್ಲ ಮಾರಕಾಸ್ತ್ರ ತೋರಿಸಿ ಬೆದರಿಸಿ ಕೂಡಿ ಹಾಕಿ ಕಿಡಿಗೇಡಿಗಳು ದರೋಡೆ ನಡೆಸಿದ್ದಾರೆ. ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿಕೊಂಡು ಡಕಾಯಿತರ ತಂಡ ಬೆಳಗ್ಗಿನ ಜಾವ ಪರಾರಿಯಾಗಿದೆ.

₹10 ಕೋಟಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚನೆ..! ಆರೋಪಿ ಬಂಧನ..!

ಡಕಾಯಿತರು ತೆರಳುತ್ತಲೆ ಮನೆಯವರು ಧರ್ಮಸ್ಥಳ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಕೂಡಲೆ ಪೋಲೀಸ್ ಅಧಿಕಾರಿಗಳು ಘಟನೆ ನಡೆದ ಮನೆಗೆ ಧಾವಿಸಿದ್ದಾರೆ. ಸ್ಥಳೀಯವಾಗಿ ವಿಶ್ವಹಿಂದೂ ಪರಿಷತ್‌ನ ಕೊಕ್ಕಡ ವಲಯ ಅಧ್ಯಕ್ಷರಾಗಿದ್ದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ಈ ದರೋಡೆ ಕೋರರು ನುಗ್ಗಿದ ವಿಷಯ ತಿಳಿಯುತ್ತಲೆ ನೂರಾರು ಮಂದಿ ಆಗಮಿಸಿದ್ದಾರೆ.

ನ್ಯೂ ಇಯರ್‌ ಸೆಲೆಬ್ರೇಷನ್‌ ಮಾಡ್ಬೇಕು ಅಂದ್ಕೊಂಡಿದ್ದೀರಾ?; ಹಾಗಿದ್ರೆ ಇಲ್ಲಿ ಗಮನಿಸಿ,

ದರೋಡೆ ಕೋರರ ತಂಡದಲ್ಲಿ ಮನೆಯೊಳಗೆ ನುಗ್ಗಿದವರು ಅಂದಾಜು ಒಂಭತ್ತು ಮಂದಿಯಷ್ಟಿದ್ದು ದರೋಡೆ ನಡೆಸಿ ಪರಾರಿಯಾಗಬಹುದಾದ ಎಲ್ಲಾ ರಸ್ತೆಗಳನ್ನ ನಾಕಾಬಂದಿ ಹಾಕಿ ಪೋಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ