ಆ್ಯಪ್ನಗರ

ಸಂಸದ ನಳಿನ್‌ ರೈಲ್ವೆ ಸಚಿವರ ಭೇಟಿ ಪ್ರತ್ಯೇಕ ಮಂಗಳೂರು ವಿಭಾಗಕ್ಕೆ ಆಗ್ರಹ

ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಗುರುವಾರ ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಮತ್ತು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್‌ ಅಂಗಡಿ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಜಿಲ್ಲೆಯಲ್ಲಿ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿದರು.

Vijaya Karnataka 28 Jun 2019, 4:27 pm
ಮಂಗಳೂರು: ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಗುರುವಾರ ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಮತ್ತು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್‌ ಅಂಗಡಿ ಅವರನ್ನು ದಿಲ್ಲಿಯಲ್ಲಿ ಭೇಟಿಯಾಗಿ ಜಿಲ್ಲೆಯಲ್ಲಿ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿದರು.
Vijaya Karnataka Web 27M-Nalin Railway


ಪ್ರಮುಖ ಬೇಡಿಕೆಗಳು: ಪ್ರತ್ಯೇಕ ಮಂಗಳೂರು ವಿಭಾಗ ರಚನೆ. ಮಂಗಳೂರು ಕೇಂದ್ರ ರೈಲು ನಿಲ್ದಾಣಕ್ಕೆ ಹೊಸ ಸುಸಜ್ಜಿತ ಕಟ್ಟಡ ನಿರ್ಮಾಣ ಹಾಗೂ ಇತರ ಮೂಲಸೌಕರ್ಯಗಳ ಅಭಿವೃದ್ಧಿ. ಮಂಗಳೂರು ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ (ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್‌ 16585/86) ರೈಲನ್ನು ಪ್ರತಿನಿತ್ಯ ಓಡಿಸುವುದು.

ಮಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ 3 ಮತ್ತು 4ನೇ ಪ್ಲಾಟ್‌ಫಾರಂ ನಿರ್ಮಾಣ ಕಾಮಗಾರಿ ತ್ವರಿತಗೊಳಿಸುವುದು. ಮಂಗಳೂರು ಮೀರಜ್‌ ಮಹಾಲಕ್ಷ್ಮೇ ಎಕ್ಸಪ್ರೆಸ್‌ ರೈಲನ್ನು ಪುನಾರಂಭಿಸಿ ಮುಂಬಯಿ (ಎಂಸಿಎಸ್‌ಟಿ) ವರೆಗೆ ವಿಸ್ತರಿಸುವುದು.

ಮಂಗಳೂರು ಪೂನಾ ಮಧ್ಯೆ ಹೊಸ ರೈಲನ್ನು ಓಡಿಸುವುದು. ಮೂಕಾಂಬಿಕಾ ರೋಡ್‌ (ಬೈಂದೂರು) - ಕಾಸರಗೋಡು ರೈಲನ್ನು ಪುನಾರಂಭಿಸಿ ಗುರುವಾಯೂರು ವರೆಗೆ ವಿಸ್ತರಿಸುವುದು.

ಕಾರವಾರ (ಮಂಗಳೂರು ಜಂಕ್ಷ ನ್‌ ಮೂಲಕ) ಯಶವಂತಪುರ ಮಧ್ಯೆ ಸಂಚರಿಸುವ (16515/16) ಹಗಲು ರೈಲನ್ನು ತಿರುಪತಿ ವರೆಗೆ ವಿಸ್ತರಿಸುವುದು. ಮಂಗಳೂರು ತಿರುಪತಿ ಮಧ್ಯೆ ಹೊಸ ರೈಲು ಮಂಜೂರು ಮಾಡುವುದು. ಮಂಗಳೂರು ಬೆಂಗಳೂರು ಮಧ್ಯೆ ಸಂಚರಿಸುವ ರೈಲುಗಳ ವೇಗ ಹೆಚ್ಚಿಸುವುದು.

ಮಂಗಳೂರಿನಿಂದ ಉತ್ತರ ಭಾರತದ ಪವಿತ್ರ ತೀರ್ಥಕ್ಷೇತ್ರಗಳಾದ ವಾರಣಾಶಿ/ಪ್ರಯಾಗ್‌ರಾಜ್‌/ ಗೋರಕಕ್‌ ಪುರ ಸಂಪರ್ಕಿಸುವಂತೆ ಹೊಸ ರೈಲು ಮಂಜೂರು ಮಾಡುವುದು. ಸುಬ್ರಹ್ಮಣ್ಯ-ಸಕಲೇಶಪುರ ಹಳಿ ದ್ವಿಪಥ ಕಾಮಗಾರಿ ಕೈಗೆತ್ತಿಕೊಳ್ಳುವುದು. ಸುಬ್ರಹ್ಮಣ್ಯ ರೋಡ… ರೈಲುನಿಲ್ದಾಣದಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ.

ಮಂಗಳೂರು ಪುತ್ತೂರು ಸುಬ್ರಹ್ಮಣ್ಯ ಪ್ಯಾಸಂಜರ್‌ ರೈಲು ಹಾಗೂ ಕಾರವಾರ-ಬೆಂಗಳೂರು ರೈಲಿನ ವೇಳೆಯಲ್ಲಿ ಬದಲಾವಣೆ ಮಾಡುವುದು.

ಮಂಗಳೂರು ಕೊಯಂಬತ್ತೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ (22609/10) ರೈಲಿಗೆ ಗುರುವಾಯೂರಿಗೆ ಪ್ರಯಾಣಿಸುವ ಯಾತ್ರಿಗಳಿಗೆ ಅನುಕೂಲವಾಗುವಂತೆ ಕುಟ್ಟಿಪುರಂ ರೈಲು ನಿಲ್ದಾಣದಲ್ಲಿ ನಿಲುಗಡೆ ಒದಗಿಸುವುದು.

ಕೊಯಮತ್ತೂರು- ಮಂಗಳೂರು ಜಂಕ್ಷ ನ್‌ ಜಬಲ್ಪುರ್‌ ಎಕ್ಸ್‌ಪ್ರೆಸ್‌ ವಿಶೇಷ ರೈಲನ್ನು ಕಾಯಂಗೊಳಿಸುವುದು ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಪೂರೈಸುವಂತೆ ಸಚಿವರಿಗೆ ಸಂಸದರು ಮನವಿ ಮಾಡಿದರು.

ಸಂಸದರ ಬೇಡಿಕೆಗಳನ್ನು ಪರಿಶಿಲಿಸಿದ ಸಚಿವರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು ಹಾಗೂ ಅಲ್ಲದೇ ಮಂಗಳೂರು ಬೆಂಗಳೂರು ಮಧ್ಯೆ ಪ್ರಸ್ತುತ ವಾರಕ್ಕೆ ಮೂರು ದಿನ ಸಂಚರಿಸುವ (ಮಂಗಳೂರು-ಯಶವಂತಪುರ ಎಕ್ಸ್‌ಪ್ರೆಸ್‌ 16585/86) ರೈಲನ್ನು ಪ್ರತಿನಿತ್ಯ ಓಡಿಸುವ ಕುರಿತು ತಕ್ಷ ಣ ಕ್ರಮ ಕೈಗೊಳ್ಳುವುದಾಗಿ ಸಂಸದರಿಗೆ ರೈಲ್ವೆ ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ