ಆ್ಯಪ್ನಗರ

ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಕೈಗೊಂಡ ಕಾರ್ಯ ಶ್ಲಾಘನೀಯ: ಮುಸ್ಲಿಂ ಸೆಂಟ್ರಲ್ ಕಮಿಟಿ

ಕೊರೊನಾ ಸೋಂಕು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡು ಕ್ರಮಗಳು ಶ್ಲಾಘನೀಯ ಹಾಗೂ ಕೊರೊನಾ ಸೋಂಕು ಧರ್ಮ ಆಧಾರಿತವಲ್ಲ ಎಂದು ನೀಡಿರುವ ಮೋದಿ ಹೇಳಿಕೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್‌ ಕಮಿಟಿ ಹೇಳಿದೆ.

Vijaya Karnataka Web 21 Apr 2020, 10:08 pm
ಮಂಗಳೂರು: ಕೊರೊನಾ ಸೋಂಕು ಧರ್ಮ ಆಧಾರಿತವಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆ ಸ್ವಾಗತಾರ್ಹ. ಸೋಂಕು ತಡೆಗಟ್ಟುವಲ್ಲಿ ಕೇಂದ್ರ ಸರಕಾರ ತೆಗೆದುಕೊಂಡ ಕ್ರಮ ಉತ್ತಮವಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿ ಹೇಳಿದೆ.
Vijaya Karnataka Web modi


ಈ ಬಗ್ಗೆ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಮಸೂದ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರವೊಂದನ್ನು ಬರೆದು ‘ನೀವು ತೆಗೆದುಕೊಂಡ ನಿರ್ಧಾರಗಳಿಂದಾಗಿ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಕನಿಷ್ಠ ಮಟ್ಟದಲ್ಲಿದೆ ಎಂದು ಹೇಳಿದ್ದಾರೆ.

ಈ ನಡುವೆ ಭಾರತದಲ್ಲಿ ಸೋಂಕು ಹರಡುವುದಕ್ಕೆ ಮುಸ್ಲಿಂ ಸಮುದಾಯ ಕಾರಣ ಎಂದು ಕೆಲವರು ದೂಷಿಸುತ್ತಿದ್ದಾರೆ. ಈ ಬಗ್ಗೆ ತಾವು ನೀಡಿದ ‘ಕೋವಿಡ್-19 ಮಹಾಮಾರಿ ಪ್ರತಿಯೊಬ್ಬರಿಗೂ ಸಮಾನವಾಗಿ ಬಾಧಿಸುತ್ತದೆ ಮತ್ತು ಈ ಸೋಂಕು ಹರಡುವಾಗ ಯಾವುದೇ ಜಾತಿ, ಮತ, ಧರ್ಮ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ’ ಎಂಬ ಹೇಳಿಕೆಗೆ ನಾನು ಅಭಾರಿಯಾಗಿರುವೆ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ ಸಡಿಲಿಕೆಗೆ ಆತುರ ಬೇಡ, ಸೋಂಕು ಮತ್ತೆ ಹರಡುವ ಅಪಾಯ: WHO ಎಚ್ಚರಿಕೆ

ಪ್ರಧಾನಿ ಹೇಳಿಕೆ ಮುಸ್ಲಿಂ ಸಮುದಾಯದಲ್ಲಿ ಆತ್ಮವಿಶ್ವಾಸ ಮತ್ತು ಭರವಸೆಯ ಭಾವವನ್ನು ಮೂಡಿಸಿದೆ. ನಿಮ್ಮ ನಾಯಕತ್ವದಲ್ಲಿ ನಾವು ಈ ಪರಿಸ್ಥಿತಿಯನ್ನು ಸಮರ್ಥವಾಗಿ ದಾಟಲಿದ್ದೇವೆ ಎಂಬ ಭರವಸೆಯನ್ನು ನಾನು ಹೊಂದಿದ್ದೇನೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

ಕೊರೊನಾ: ಸುಳ್ಯದ ಅಜ್ಜಾವರ ಗ್ರಾಮ ಸೀಲ್‌ ಡೌನ್‌

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ