ಆ್ಯಪ್ನಗರ

ಹಿಂದೂ ಮುಖಂಡರಿಗೆ ಸೂಕ್ತ ಭದ್ರತೆ ನೀಡಲು ನಳಿನ್‌ ಆಗ್ರಹ

ಕರಾವಳಿಯ ಹಿಂದೂ ನಾಯಕರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ ಬಗ್ಗೆ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ನಾಯಕರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಆಗ್ರಹಿಸಿದ್ದಾರೆ.

Vijaya Karnataka 12 Jan 2019, 4:09 pm
ಮಂಗಳೂರು: ಕರಾವಳಿಯ ಹಿಂದೂ ನಾಯಕರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ ಬಗ್ಗೆ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಹಿಂದೂ ನಾಯಕರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಆಗ್ರಹಿಸಿದ್ದಾರೆ.
Vijaya Karnataka Web NALEENKUMAR KATEEL


ಹಿಂದೂ ಸಮಾಜಕ್ಕೆ ಮಾರ್ಗದರ್ಶಕರಾಗಿರುವ ಡಾ. ಪ್ರಭಾಕರ ಭಟ್‌ ಕಲ್ಲಡ್ಕ, ವಿಶ್ವ ಹಿಂದೂ ಪರಿಷತ್‌ನ ಮುಖಂಡರಾದ ಜಗದೀಶ ಶೇಣವ ಮತ್ತು ಶರಣ್‌ ಪಂಪ್‌ವೆಲ್‌ ಹತ್ಯೆಗೆ ರಾಷ್ಟ್ರಘಾತಕ ಶಕ್ತಿಗಳು ಸಂಚು ನಡೆಸಿವೆ ಎನ್ನುವ ಮಾಹಿತಿಯಿಂದ ಕರಾವಳಿಯಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯಿಂದಾಗಿ ಕರಾವಳಿಯಲ್ಲಿ ಅಮಾಯಕ ಹಿಂದೂ ಯುವಕರ ಹತ್ಯೆ ನಡೆದಿತ್ತು. ರಾಜ್ಯ ಸರಕಾರ ತಕ್ಷ ಣ ಎಚ್ಚೆತ್ತುಕೊಳ್ಳಬೇಕು. ಮತೀಯವಾದಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಆಗ್ರಹ: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ ಹಿಂದೂ ಸಂಘಟನೆಯ ಪ್ರಮುಖರಾದ ಡಾ. ಪ್ರಭಾಕರ ಭಟ್‌, ಶರಣ್‌ ಪಂಪವೆಲ್‌, ಜಗದೀಶ್‌ ಶೇಣವ ಮತ್ತಿತರ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಬಂದ ಮಾಹಿತಿ ಬಹಳ ಆತಂಕವಾಗಿದ್ದು, ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಸಂಚು ರೂಪಿಸಿದವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಕ್ಷಿಣ ಪ್ರಾಂತ ವಿಶ್ವ ಹಿಂದೂ ಪರಿಷತ್‌ ಕಾರ್ಯಾಧ್ಯಕ್ಷ ಪ್ರೊ.ಎಂ.ಬಿ. ಪುರಾಣಿಕ್‌ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ