ಆ್ಯಪ್ನಗರ

ಎನ್‌ಡಿಆರ್‌ಎಫ್‌ ಕಾರ್ಯಾಚರಣೆ ರದ್ದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಇಳಿಮುಖವಾದ್ದರಿಂದ ಇಲ್ಲಿಗೆ ಆಗಮಿಸಬೇಕಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್‌) ಕರಾವಳಿ ಭಾಗದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಪಡಿಸಿದೆ.

Vijaya Karnataka 12 Aug 2019, 5:00 am
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆರೆ ಪರಿಸ್ಥಿತಿ ಇಳಿಮುಖವಾದ್ದರಿಂದ ಇಲ್ಲಿಗೆ ಆಗಮಿಸಬೇಕಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್‌) ಕರಾವಳಿ ಭಾಗದಲ್ಲಿ ತನ್ನ ಕಾರ್ಯಾಚರಣೆಯನ್ನು ರದ್ದುಪಡಿಸಿದೆ.
Vijaya Karnataka Web ndrf operation cancelled
ಎನ್‌ಡಿಆರ್‌ಎಫ್‌ ಕಾರ್ಯಾಚರಣೆ ರದ್ದು


ಹೊಸದಿಲ್ಲಿಯಿಂದ ವಾಯುಪಡೆ ವಿಶೇಷ ವಿಮಾನದಲ್ಲಿ ಶುಕ್ರವಾರ ಎನ್‌ಡಿಆರ್‌ಎಫ್‌ ತಂಡ ಮಂಗಳೂರಿಗೆ ಆಗಮಿಸಿತ್ತು. ಆದರೆ ವಿಮಾನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗದೇ ಇದ್ದುದರಿಂದ ಬೆಂಗಳೂರಿಗೆ ತೆರಳಿತ್ತು. ಶನಿವಾರ ಎರಡನೇ ಬಾರಿಗೆ ಮಂಗಳೂರಿಗೆ ಆಗಮಿಸುವ ಪ್ರಯತ್ನ ನಡೆಸಿದ್ದರೂ ಪ್ರತಿಕೂಲ ಹವಾಮಾನದಿಂದ ವಿಮಾನ ಮತ್ತೆ ಬೆಂಗಳೂರಿಗೆ ವಾಪಸಾಗಿತ್ತು.

ಬಳಿಕ ತಂಡ ರಸ್ತೆ ಮಾರ್ಗ ಮೂಲಕ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುವುದಿತ್ತು. ಆದರೆ ನೆರೆ ಪರಿಸ್ಥಿತಿ ಸಂಪೂರ್ಣ ಇಳಿಮುಖವಾದ್ದರಿಂದ ಇಲ್ಲಿನ ಕಾರ್ಯಾಚರಣೆ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ