ಮಂಗಳೂರು: ಉಳ್ಳಾಲ ಕ್ಷೇತ್ರದ ಮಾಜಿ ಶಾಸಕ ಬಿ.ಎ. ಇದಿನಬ್ಬ ಅವರ ಪುತ್ರನ ಮನೆಗೆ ಎನ್ ಐಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹೊರಟ ಸುಮಾರು 20 ಮಂದಿ ಎನ್ ಐಎ ಅಧಿಕಾರಿಗಳು ಉಳ್ಳಾಲದಲ್ಲಿರುವ ಇದಿನಬ್ಬ ಅವರ ಪುತ್ರ ಬಿ.ಎಂ. ಪಾಷಾ ಮನೆಗೆ ಧಾಳಿ ನಡೆಸಿದ್ದಾರೆ. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಐಸಿಸ್ ನಂಟು ಶಂಕೆ?
ಇದಿನಬ್ಬ ಅವರ ಪುತ್ರಿ ಸಿರಿಯಾ ಮೂಲದ ಉಗ್ರಗಾಮಿ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿ ಬಳಿಕ ಕೇರಳದಿಂದ ನಾಪತ್ತೆಯಾಗಿದ್ದಾರೆ. ಈ ಘಟನೆ ನಡೆದು 10ವರ್ಷ ಬಳಿಕ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರನೂ ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಇದು ಮಾತ್ರವಲ್ಲದೆ ಕೆಲವೊಂದು ಗೌಪ್ಯ ಮಾಹಿತಿ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಕರಾವಳಿಯಲ್ಲಿ ಕೊರೊನಾ ಕಾಟ: ಬುಧವಾರದಿಂದ ಶ್ರೀಕ್ಷೇತ್ರ ಕುಕ್ಕೆಯಲ್ಲಿ ಸೇವೆ ಸ್ಥಗಿತ
ಐಸಿಸ್ ನಂಟು ಶಂಕೆ?
ಇದಿನಬ್ಬ ಅವರ ಪುತ್ರಿ ಸಿರಿಯಾ ಮೂಲದ ಉಗ್ರಗಾಮಿ ಸಂಘಟನೆ ಐಸಿಸ್ ಜತೆ ಸಂಪರ್ಕ ಹೊಂದಿ ಬಳಿಕ ಕೇರಳದಿಂದ ನಾಪತ್ತೆಯಾಗಿದ್ದಾರೆ. ಈ ಘಟನೆ ನಡೆದು 10ವರ್ಷ ಬಳಿಕ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರನೂ ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿ, ಮೃದು ಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಇದು ಮಾತ್ರವಲ್ಲದೆ ಕೆಲವೊಂದು ಗೌಪ್ಯ ಮಾಹಿತಿ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಕರಾವಳಿಯಲ್ಲಿ ಕೊರೊನಾ ಕಾಟ: ಬುಧವಾರದಿಂದ ಶ್ರೀಕ್ಷೇತ್ರ ಕುಕ್ಕೆಯಲ್ಲಿ ಸೇವೆ ಸ್ಥಗಿತ