ಆ್ಯಪ್ನಗರ

ಅ.29ಕ್ಕೆ ಧರ್ಮಸ್ಥಳಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎಲ್‌ಐಸಿ ಸಹಯೋಗದೊಂದಿಗೆ ಸೇರಿ ಕಾರ್ಯರೂಪಕ್ಕೆ ತರುತ್ತಿರುವ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಗೆ ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್‌ ಚಾಲನೆ ನೀಡಲಿದ್ದಾರೆ.

Vijaya Karnataka 24 Oct 2018, 9:39 am
ಬೆಳ್ತಂಗಡಿ ( ದ.ಕ ): ಕೇಂದ್ರ ರಕ್ಷಣಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅ. 29ಕ್ಕೆ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎಲ್‌ಐಸಿ ಸಹಯೋಗದೊಂದಿಗೆ ಸೇರಿ ಕಾರ್ಯರೂಪಕ್ಕೆ ತರುತ್ತಿರುವ ಪ್ರಗತಿ ರಕ್ಷಾ ಕವಚ ವಿಮಾ ಯೋಜನೆಗೆ ಅವರು ಚಾಲನೆ ನೀಡಲಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ತಿಳಿಸಿದರು.
Vijaya Karnataka Web nirmala sitharaman.


ಈ ಯೋಜನೆಯ ಅಡಿಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲ ಸದಸ್ಯರು ಪಡೆಯುವ ಸಾಲಗಳನ್ನು ವಿಮೆ ವ್ಯಾಪ್ತಿಗೆ ಒಳಪಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇದರಿಂದಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 40 ಲಕ್ಷ ಪ್ರಗತಿ ಬಂಧು ತಂಡಗಳ 70 ಲಕ್ಷ ಸದಸ್ಯರಿಗೆ ಪ್ರಯೋಜನವಾಗಲಿದೆ. ಇದರಿಂದಾಗಿ ಸಾಲ ಪಡೆದ ಸದಸ್ಯರು ಅಥವಾ ಅವರ ಕುಟುಂಬದ ಯಜಮಾನ ಅಕಾಲಿಕವಾಗಿ ಮೃತಪಟ್ಟರೆ ಅವರ ಸಾಲವನ್ನು ವಿಮಾ ನಿಗಮ ಭರಿಸುತ್ತದೆ ಹಾಗೂ ಉಳಿಕೆ ಹಣವನ್ನು ಅವರ ಕುಟುಂಬಕ್ಕೆ ನೀಡುತ್ತದೆ. ಇದರಿಂದಾಗಿ ಸದಸ್ಯರಿಗೆ ಹಾಗೂ ಸ್ವಸಹಾಯ ಸಂಘಗಳಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ