ಆ್ಯಪ್ನಗರ

ಗ್ರಾಮೀಣ ಪ್ರದೇಶದಲ್ಲಿ ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸ್ತಬ್ಧ!

ಸುಳ್ಯ: ಅತಿ ಹೆಚ್ಚು ಗ್ರಾಹಕ ಬಳಕೆದಾರರನ್ನು ಹೊಂದಿರುವ ಬಿ.ಎಸ್‌.ಎನ್‌.ಎಲ್‌. ಇದೀಗ ಗ್ರಾಮಾಂತರ ಪ್ರದೇಶದಲ್ಲಿ ಸರಿಯಾಗಿ ನೆಟ್‌ವರ್ಕ್‌ ಸಿಗದೆ ಶೋಚನೀಯ ಪರಿಸ್ಥಿತಿಯಲ್ಲಿದೆ.

Vijaya Karnataka 18 Jun 2019, 5:00 am
ಸುಳ್ಯ: ಅತಿ ಹೆಚ್ಚು ಗ್ರಾಹಕ ಬಳಕೆದಾರರನ್ನು ಹೊಂದಿರುವ ಬಿ.ಎಸ್‌.ಎನ್‌.ಎಲ್‌. ಇದೀಗ ಗ್ರಾಮಾಂತರ ಪ್ರದೇಶದಲ್ಲಿ ಸರಿಯಾಗಿ ನೆಟ್‌ವರ್ಕ್‌ ಸಿಗದೆ ಶೋಚನೀಯ ಪರಿಸ್ಥಿತಿಯಲ್ಲಿದೆ.
Vijaya Karnataka Web no network in rural area
ಗ್ರಾಮೀಣ ಪ್ರದೇಶದಲ್ಲಿ ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಸ್ತಬ್ಧ!


ಒಂದು ಕಾಲದಲ್ಲಿ ಪ್ರತಿ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿದ್ದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಬಳಿಕ ಖಾಸಗಿ ಮೊಬೈಲ್‌ ಕಂಪೆನಿಗಳು ಬಂದ ಬಳಿಕ ಹಂತ-ಹಂತವಾಗಿ ತನ್ನ ನೆಟ್‌ವರ್ಕ್‌ ವ್ಯಾಪ್ತಿ ಕಳೆದುಕೊಳ್ಳುತ್ತಾ ಸಾಗಿ ಇದೀಗ ಬಳಕೆದಾರರು ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅರಂತೋಡು- ಕಲ್ಲುಗುಂಡಿ- ಕೊಡಗು ಸಂಪಾಜೆ- ಜಾಲ್ಸೂರು- ಕನಕಮಜಲು ಸಹಿತ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲೇ ಸರಿಯಾಗಿ ಸಿಗದ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಗ್ರಾಮೀಣ ಪ್ರದೇಶದಲ್ಲಿ ಸಂಪೂರ್ಣ ಸ್ಥಬ್ಧಗೊಂಡಿದೆ.

ಸುಳ್ಯ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಆಯಾ ಗ್ರಾಮ ಪಂಚಾಯಿತಿ ಕಚೇರಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ, ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಅನೇಕ ಬ್ಯಾಂಕ್‌ಗಳ ಸಹಿತ ಹಲವಾರು ಸಂಘ ಸಂಸ್ಥೆಗಳು ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಕನೆಕ್ಷ ನ್‌ ಹೊಂದಿದ್ದು, ಇತ್ತೀಚಿನ ದಿನಗಳಲ್ಲಿ ತೀವ್ರ ನೆಟ್‌ವರ್ಕ್‌ ಸಮಸ್ಯೆ ಎದುರಿಸುತ್ತಿದ್ದು, ಜನಸಾಮಾನ್ಯರಿಗೆ ಕಚೇರಿ ಕೆಲಸ ಕಾರ್ಯಗಳಿಗೆ ತೊಂದರೆಯಾಗುತ್ತಿದೆ.

ಇಂದಿನ ಯುಗದಲ್ಲಿ ಹೆಚ್ಚಿನ ವಹಿವಾಟುಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದ್ದು, ಇದಕ್ಕೆ ಇಂಟರ್‌ನೆಟ್‌ ಸೌಲಭ್ಯ ಅತಿ ಅಗತ್ಯ. ಆದರೆ ಪದೇ ಪದೇ ಸ್ತಬ್ಧಗೊಳ್ಳುತ್ತಿರುವ ನೆಟ್‌ವರ್ಕ್‌ನಿಂದಾಗಿ ಗ್ರಾಮೀಣ ಪ್ರದೇಶದ ಜನರ ಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ. ಕೆಲವು ಪ್ರದೇಶಗಳಲ್ಲಿ ಕರೆಂಟ್‌ ಹೋದರೆ ಬಿಎಸ್‌ಎನ್‌ಎಲ್‌ ಸಂಪರ್ಕ ಕಳೆದುಕೊಳ್ಳುತ್ತಿದ್ದು, ಕರೆಂಟ್‌ ಇರುವಾಗ ಮಾತ್ರ ಸೇವೆ ಒದಗಿಸುತ್ತಿದೆ. ಆದರೆ ಇನ್ನೂ ಕೆಲವು ಗ್ರಾಮೀಣ ಭಾಗಗಳಲ್ಲಿ ಕರೆಂಟ್‌ ಇದ್ದರೂ, ಇಲ್ಲದಿದ್ದರೂ ನೆಟ್‌ವರ್ಕ್‌ ಸಿಗುವುದೇ ಇಲ್ಲ. ಹೆಚ್ಚಿನ ಕಡೆಗಳಲ್ಲಿ ಟವರ್‌ನ ಬ್ಯಾಟರಿ ಚಾರ್ಜ್‌ ಮಾಡಲು ಜನರೇಟರ್‌ಗೆ ಸಮರ್ಪಕ ಡೀಸೆಲ್‌ ಕೊರತೆಯಿಂದ ಸಮಸ್ಯೆಯಾಗುತ್ತಿದೆ. ಇದೀಗ ಮಳೆಗಾಲ ಪ್ರಾರಂಭಗೊಂಡಿದ್ದು, ಕರೆಂಟ್‌ ಸಮಸ್ಯೆಯೂ ವಿಪರೀತವಾಗಿದೆ. ಒಟ್ಟಿನಲ್ಲಿ ಗ್ರಾಮಾಂತರ ಪ್ರದೇಶಗಳ ಜನಸಾಮಾನ್ಯರ ಗೋಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

* ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಜಾಲ್ಸೂರು, ಕನಕಮಜಲು, ಕಲ್ಲುಗುಂಡಿ ಸಹಿತ ನಾನಾ ಕಡೆ ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ ಬಹುತೇಕ ಸ್ತಬ್ಧ ಆಗಿದೆ. ಇನ್ನಾದರೂ ಜನಪ್ರತಿನಿಧಿಗಳು, ಸರಕಾರ ಗಮನಹರಿಸಬೇಕಾಗಿದೆ.

- ಪದ್ಮನಾಭ, ಗ್ರಾಹಕ, ಸುಳ್ಯ


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ