ಆ್ಯಪ್ನಗರ

Dussehra Holidays: ದಸರಾ ರಜೆಯಲ್ಲಿ ಕಡಿತವಿಲ್ಲ - ಸಚಿವ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ದಸರಾ ರಜೆಯಲ್ಲಿ ಯಾವುದೇ ಕಡಿತವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ, ಸಿಇಒ, ಡಿಡಿಪಿಐ ಜತೆ ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.

Vijaya Karnataka Web 27 Sep 2018, 4:30 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ದಸರಾ ರಜೆಯಲ್ಲಿ ಯಾವುದೇ ಕಡಿತವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ, ಸಿಇಒ, ಡಿಡಿಪಿಐ ಜತೆ ಚರ್ಚೆ ನಡೆಸಿ ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದರು.
Vijaya Karnataka Web khader


ನಗಲದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಮಳೆ ಮತ್ತಿತರ ಕಾರಣಗಳಿಂದ ಹೆಚ್ಚು ರಜೆ ಮಾಡಿದ್ದರೆ, ಅದನ್ನು ಹೇಗಾದರೂ ಮಾಡಿ ಸರಿದೂಗಿಸಲಿ. ವರ್ಷಕ್ಕೊಮ್ಮೆ ಬರುವ ದಸರಾ ರಜೆಗೆ ಹೆಚ್ಚಿನ ಪೋಷಕರು ವಿವಿಧ ಕಾರ್ಯಕ್ರಮ ರೂಪಿಸಿದ್ದಾರೆ. ಆದ್ದರಿಂದ ಹಿಂದಿನ ಮಾದರಿಯಲ್ಲೇ ಅ.7-21ರ ತನಕ ರಜೆ ಇರಲಿದೆ. ಅದರಲ್ಲಿ ಕಡಿತ ಮಾಡುವುದಿಲ್ಲ ಸ್ಪಷ್ಟಪಡಿಸಿದರು.

ಮೂಲರಪಟ್ಣ ಸೇತುವೆ ಕುಸಿತ ಪ್ರದೇಶವನ್ನು ದುರಸ್ತಿ ಮಾಡುವ ಬದಲು ಆ ಜಾಗದಲ್ಲಿ ಹೊಸದಾದ ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಪಿಡಬ್ಲ್ಯೂಡಿ ಇಲಾಖೆಗೆ 50 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಗುರುಪುರ ಸೇತುವೆಯನ್ನು ಹೊಸದಾಗಿ ನಿರ್ಮಿಸಲು ಎನ್‌ಎಚ್ಎಐನಿಂದ 35 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತಿದೆ. ಗುರುಪುರದ ನೂತನ ಸೇತುವೆ ನಿರ್ಮಾಣವಾಗುವವರೆಗೂ ಹಳೆಯ ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವಿದೆ ಎಂದರು.
ಮೂಲರಪಟ್ಣವನ್ನು ಉಳ್ಳಾಲ, ಮಂಗಳೂರಿನಂತೆ ವಾಣಿಜ್ಯ ಕೇಂದ್ರವಾಗಿ ರೂಪಿಸಲಾಗುವುದು. ತಲಪಾಡಿಯಿಂದ ಮುಡಿಪುವರೆಗೆ ಅಭಿವೃದ್ಧಿ ಹೊಂದಿದ್ದು, ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ ಎಂದರು.

ಉಳ್ಳಾಲ ಪರಿಸರಕ್ಕೆ ಕುಡಿಯುವ ನೀರಿಗಾಗಿ 198 ಕೋಟಿ ರೂ. ಕರ್ನಾಟಕ ನೀರು ಸರಬರಾಜು ಮಂಡಳಿಗೆ ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದರು.

ಮಂಗಳೂರು ತುಳು ಭವನದ 4.5 ಕೋಟಿ ರೂ. ವೆಚ್ಚದ ಬಾಕಿ ಕಾಮಗಾರಿ ಮುಗಿಸಿ, ಮಾದರಿಯನ್ನಾಗಿ ರೂಪಿಸಲಾಗುವುದು ಎಂದರು.
ಕರಾವಳಿಯ‌ ಮರಳು‌ ಮತ್ತು ಭೂಪರಿವರ್ತನೆ ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ಸುದೀರ್ಘ ಚರ್ಚೆ ನಡೆಸಿದ್ದು, ಕಾಲ ಮಿತಿಯೊಳಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಖಾದರ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ