ಆ್ಯಪ್ನಗರ

ವಿಟ್ಲದಲ್ಲಿ ಪ್ರಪಾತಕ್ಕೆ ಬಿದ್ದ ಒಮ್ನಿ: ಹಲವರಿಗೆ ಗಾಯ!

ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಓಮ್ಮಿ ಚಾಲಕನ ನಿಯಂತ್ರಣ ತಪ್ಪಿ ವೀರಕಂಬ ಗ್ರಾಮ ಪಂಚಾಯಿತಿ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರುಳಿದೆ. ​​ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Vijaya Karnataka Web 16 Dec 2020, 11:41 am
ವಿಟ್ಲ: ವಿಟ್ಲ-ಮಂಗಳೂರು ರಸ್ತೆಯ ವೀರಕಂಬದಲ್ಲಿ ಮಂಗಳವಾರ ಒಮ್ನಿ ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯರು ಹಾಗೂ ಮಕ್ಕಳು ಗಾಯಗೊಂಡಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ವಿಟ್ಲ ಕಡೆಯಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ಪರಿಣಾಮ ವೀರಕಂಬ ಗ್ರಾಮ ಪಂಚಾಯಿತಿ ಕಚೇರಿಯ ಸಮೀಪ ಇರುವ ಪ್ರಪಾತಕ್ಕೆ ಉರುಳಿದೆ.

ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಪಾತದ ಕೆಳಗಡೆ ಮನೆಯೊಂದು ಇದ್ದು, ಅವರ ಅಂಗಳಕ್ಕೆ ಈ ಕಾರು ಬಿದ್ದು, ಸಂಪೂರ್ಣವಾಗಿ ಜಖಂಗೊಂಡಿದೆ.
ಪೋಳ್ಯದಲ್ಲಿ ರಸ್ತೆ ಅಪಘಾತ: ಹಿರಿಯ ಆರೆಸ್ಸೆಸ್ ಮುಖಂಡ ವೆಂಕಟರಮಣ ಹೊಳ್ಳ ನಿಧನ

ಒಮ್ನಿಯಲ್ಲಿದ್ದವರು ಮಾರಿಪಳ್ಳ ನಿವಾಸಿಗಳಾಗಿದ್ದು, ವಿಟ್ಲದ ಒಕ್ಕೆತ್ತೂರು ಎಂಬಲ್ಲಿರುವ ಸಂಬಂಧಿಕರ ಮನೆಗೆ ಬಂದು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೈಸೂರು: ಅಪ್ರಾಪ್ತನ ಕಾರು ಕಲಿಯುವ ಹುಚ್ಚಾಟಕ್ಕೆ ಒಂದೇ ಕುಟುಂಬದ ಮೂವರು ಬಲಿ..!

ವಿಟ್ಲ-ಕಲ್ಲಡ್ಕ ನಡುವೆ ಇರುವ ಅಪಾಯಕಾರಿ ತಿರುವಿನಲ್ಲಿ ಪ್ರಪಾತ ಇದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಕೆಲವು ವರ್ಷಗಳ ಹಿಂದೆ ಇದೇ ಪ್ರಪಾತಕ್ಕೆ ಜೀಪೊಂದು ಉರುಳಿ ಬಿದ್ದಿತ್ತು. ಇಲ್ಲಿ ತಡೆಗೋಡೆ ನಿರ್ಮಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ