ಆ್ಯಪ್ನಗರ

ಮಹಾಮಾರಿ ಡೆಂಗೆ ಜ್ವರಕ್ಕೆ ಮಂಗಳೂರಿನಲ್ಲಿ ಮತ್ತೊಬ್ಬರು ಬಲಿ

ರಾಜ್ಯಾದ್ಯಂತ ಡೆಂಗೆ ಜ್ವರದ ಹಾವಳಿ ಹೆಚ್ಚಾಗಿದೆ. ಈ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡೆಂಗೆ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಈಗಾಗಲೇ ಮಹಾಮಾರಿ ಡೆಂಗೆಗೆ ಮೂವರು ಮೃತಪಟ್ಟಿದ್ದಾರೆ.

Vijaya Karnataka Web 21 Jul 2019, 9:22 am
ದಕ್ಷಿಣ ಕನ್ನಡ: ಮಹಾಮಾರಿ ಡೆಂಗೆ ಜ್ವರಕ್ಕೆ ಮಂಗಳೂರಿನಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಪ್ರವೀಣ್‌ಚಂದ್ರ ಕದ್ರಿ ಎಂಬುವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Vijaya Karnataka Web dengue


ಮಂಗಳೂರು ಮಹಾನಗರ ಪಾಲಿಕೆಯ ಘನ ತ್ಯಾಜ್ಯ ನಿರ್ವಹಣೆಯ ಗುತ್ತಿಗೆದಾರ ಕಂಪನಿ ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್‌ನ ಕಂಕನಾಡಿ ವಲಯದ ಸುಪರ್‌ವೈಸರ್ ಆಗಿ
ಯಾಗಿ ಪ್ರವೀಣ್‌ಚಂದ್ರ ಕದ್ರಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರತಿದಿನ ಬೆಳಗ್ಗೆ ಕಂಕನಾಡಿ ಮಾರುಕಟ್ಟೆ ಸಮೀಪ ಆಗಮಿಸಿ, ಪೌರ ಕಾರ್ಮಿಕರ ಫೋಟೊ ತೆಗೆಯುವ ಮೂಲಕ ಹಾಜರಾತಿ ಪಡೆದು, ಶುಚಿತ್ವ ಕೆಲಸಕ್ಕೆ ಮಾರ್ಗದರ್ಶನ ನೀಡುತ್ತಿದ್ದರು.

ಡೆಂಗೆಗೆ ಬಲಿಯಾದ ಪ್ರವೀಣ್‌ ಚಂದ್ರ ಕದ್ರಿ


ಕೆಲವು ದಿನಗಳ‌ ಹಿಂದೆ ಜ್ವರಕ್ಕೆ ತುತ್ತಾಗಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗೆ ಪಾಸಿಟಿವ್ ಕಂಡು ಬಂದ ಬಳಿಕ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ, ಶನಿವಾರ ರಾತ್ರಿ ಕೊನೆಯುಸಿರೆಳೆದರು ಎಂದು ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ.

ಡೆಂಗೆಗೆ ಮಂಗಳೂರಿನಲ್ಲಿ ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಮಂದಿ ಡೆಂಗೆ ಜ್ವರದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ