ಆ್ಯಪ್ನಗರ

ಯುವಕರಿಗೆ ಕೃಷಿ ಸಾಧನೆಗೆ ವಿಪುಲ ಅವಕಾಶ

ಕೃಷಿಯಲ್ಲಿಯೂ ಪ್ರಯೋಗಗಳ ಮೂಲಕ ಸಾಧನೆಗೆ ಯುವಕರಿಗೆ ಸಾಕಷ್ಟು ಅವಕಾಶಗಳಿದೆ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಹೇಳಿದ್ದಾರೆ.

Vijaya Karnataka 5 Dec 2018, 5:00 am
ಬಂಟ್ವಾಳ: ಕೃಷಿಯಲ್ಲಿಯೂ ಪ್ರಯೋಗಗಳ ಮೂಲಕ ಸಾಧನೆಗೆ ಯುವಕರಿಗೆ ಸಾಕಷ್ಟು ಅವಕಾಶಗಳಿದೆ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಹೇಳಿದ್ದಾರೆ.
Vijaya Karnataka Web options for youths
ಯುವಕರಿಗೆ ಕೃಷಿ ಸಾಧನೆಗೆ ವಿಪುಲ ಅವಕಾಶ


ಸರಪಾಡಿ ಯುವಕ ಮಂಡಲದ ನೂತನ ಅಡುಗೆ ಕೊಠಡಿ ಉದ್ಘಾಟನೆ, ದಿ.ಪಟ್ಲಕೆರೆ ನಾರಾಯಣ ಶಾಂತಿ ಸಭಾಂಗಣಕ್ಕೆ ಶಿಲಾನ್ಯಾಸ ಹಾಗೂ ದ.ಕ.ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಸಹಯೋಗದಲ್ಲಿ ನಡೆದ ಕಬಡ್ಡಿ ಪಂದ್ಯಾಟ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಮಣಿನಾಲ್ಕೂರು ಗ್ರಾ.ಪಂ.ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ ಅಧ್ಯಕ್ಷ ತೆ ವಹಿಸಿದ್ದರು. ಸಾಧಕ ಪ್ರತಿಭೆಗಳಾದ ರವಿ ಸಾಲಿಯಾನ್‌ ಹಾಗೂ ಸುಶ್ಮಿತಾ ಅವರಿಗೆ ಯುವ ಪುರಸ್ಕಾರ ನೀಡಿ ಗೌರವಿಸಲಾಯಿತು.

ಮಹಾರಾಷ್ಟ್ರದ ಬಿಜೆಪಿ ಮುಂದಾಳು ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ, ಬಾಚಕೆರೆ ಶ್ರೀದುರ್ಗಾಪರಮೇಶ್ವರಿ ಕ್ಷೇತ್ರದ ಧರ್ಮದರ್ಶಿ ದೇಜಪ್ಪ ಬಾಚಕೆರೆ, ಚಲನಚಿತ್ರ ನಿರ್ಮಾಪಕ ಚಂದ್ರಹಾಸ ಶೆಟ್ಟಿ, ಜಿಲ್ಲಾ ಬಿಜೆಪಿ ಮುಂದಾಳು ರಾಜಗೋಪಾಲ ರೈ, ಬಂಟ್ವಾಳ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಅಧ್ಯಕ್ಷ ಬೇಬಿ ಕುಂದರ್‌, ಪ್ರಗತಿಪರ ಕೃಷಿಕ ನಾರಾಯಣ ಪೂಜಾರಿ ಬೊಳ್ಳುಕಲ್ಲು, ಸರಪಾಡಿ ಗ್ರಾ.ಪಂ.ಸದಸ್ಯ ದಯಾನಂದ ಶೆಟ್ಟಿ ಅಮೈ, ಶಂಕರನಾರಾಯಣ ಹೊಳ್ಳ, ಚಂದ್ರಹಾಸ ಶೆಟ್ಟಿ ಹೊಳ್ಳರಗುತ್ತು, ಶಶಿಕಾಂತ ಶೆಟ್ಟಿ ಆರುಮುಡಿ, ಕುಸುಮಾಕರ ಶೆಟ್ಟಿ ಕುರ್ಯಾಳ, ನೇಮಿರಾಜ ರೈ, ರತ್ನಾಕರ ಭಟ್‌ ಸರಪಾಡಿ, ಪದ್ಮನಾಭ ಭಟ್‌ ಕಾಸರಗೋಡು, ಮಜೀದ್‌ ಕಾಸರಗೋಡು ಉಪಸ್ಥಿತರಿದ್ದರು.

ಯಕ್ಷ ಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಕ ಮಂಡಲದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಪಿ. ಸ್ವಾಗತಿಸಿದರು. ರಾಧಾಕೃಷ್ಣ ರೈ ಕೊಟ್ಟುಂಜ ವಂದಿಸಿದರು. ಕಾರ್ಯದರ್ಶಿ ಕಿರಣ್‌ ಸರಪಾಡಿ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ