ಆ್ಯಪ್ನಗರ

ಮಂಗಳೂರಿನಲ್ಲಿ 200ಕ್ಕೂ ಹೆಚ್ಚು ರೌಡಿಗಳ ಪರೇಡ್‌

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯ 200ಕ್ಕೂ ಹೆಚ್ಚು ರೌಡಿಗಳನ್ನು ಬುಧವಾರ ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಪರೇಡ್‌ ನಡೆಸಿ ಎಚ್ಚರಿಕೆ ನೀಡಲಾಗಿದೆ.

Vijaya Karnataka 15 Mar 2019, 4:06 pm
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಮಂಗಳೂರು ಕಮಿಷನರೇಟ್‌ ವ್ಯಾಪ್ತಿಯ 200ಕ್ಕೂ ಹೆಚ್ಚು ರೌಡಿಗಳನ್ನು ಬುಧವಾರ ನಗರದ ಪೊಲೀಸ್‌ ಪರೇಡ್‌ ಮೈದಾನದಲ್ಲಿ ಪರೇಡ್‌ ನಡೆಸಿ ಎಚ್ಚರಿಕೆ ನೀಡಲಾಗಿದೆ.
Vijaya Karnataka Web over 200 rowdies paraded in mangalore
ಮಂಗಳೂರಿನಲ್ಲಿ 200ಕ್ಕೂ ಹೆಚ್ಚು ರೌಡಿಗಳ ಪರೇಡ್‌


ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಮಾಡುವುದು ಬಿಟ್ಟು ಸಾಮಾನ್ಯ ನಾಗರಿಕರಂತೆ ಬದುಕಬೇಕು. ಈಗಾಗಲೇ ತೊಡಗಿಸಿಕೊಂಡಿರುವವರು ಅದನ್ನು ಬಿಟ್ಟು ಗೌರವಯುತ ವೃತ್ತಿಗಳಲ್ಲಿ ಮುಂದುವರಿಯಬೇಕು. ಪ್ರತಿಯೊಬ್ಬರ ಚಲನವಲನಗಳನ್ನು ಇಲಾಖೆ ಗಮನಿಸುತ್ತಿರುತ್ತದೆ. ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಗೂಂಡಾ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೊಳಿಸಿ ಗಡಿಪಾರು ಮಾಡುವ ಕೆಲಸ ಮಾಡಲಾಗುವುದು ಎಂದು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಮುಗಿಯುವ ತನಕ ಸನ್ನಡತೆ ಹೊಂದಿದ್ದರೆ ಠಾಣೆಗಳಲ್ಲಿ ದಾಖಲಾಗಿರುವ ರೌಡಿ ಹಾಳೆಯನ್ನು ಮುಕ್ತಾಯ ಮಾಡುವತ್ತ ಮಹತ್ವ ನೀಡಲಾಗುವುದು. ಯಾರು ಕೂಡ ಮುಚ್ಚಳಿಕೆ ಪತ್ರದ ವಿರುದ್ಧ ನಡೆದುಕೊಳ್ಳಬಾರದು. ಇದರಿಂದ ನಿಮಗೆ ಮಾತ್ರವಲ್ಲ ಕುಟುಂಬಕ್ಕೂ ತೊಂದರೆಯಾಗುತ್ತದೆ ಎಂದು ಆಯುಕ್ತರು ಎಚ್ಚರಿಸಿದರು.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹನುಮಂತರಾಯ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಉಮಾ ಪ್ರಶಾಂತ್‌, ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀನಿವಾಸ್‌ ಗೌಡ, ದಕ್ಷಿಣ ವಿಭಾಗದ ಎಸಿಪಿ ರಾಮರಾವ್‌, ಕೇಂದ್ರ ವಿಭಾಗದ ಎಸಿಪಿ ಸುಧೀರ್‌ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ