ಆ್ಯಪ್ನಗರ

ಸರಕು ವಾಹನಗಳಲ್ಲಿ ಕಾರ್ಮಿಕರ ಸಾಗಾಟ ತಡೆಗೆ ಜಾಗೃತಿ ಅಭಿಯಾನ

ಸರಕು ಸಾಗಾಟ ವಾಹನಗಳಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವ ಪ್ರಕರಣ ಹೆಚ್ಚುತ್ತಿರುವುದನ್ನು ...

Vijaya Karnataka 26 May 2019, 4:47 pm
ಸರಕು ಸಾಗಾಟ ವಾಹನಗಳಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವ ಪ್ರಕರಣ ಹೆಚ್ಚುತ್ತಿರುವುದನ್ನು ತಡೆಗಟ್ಟುವ ಉದ್ದೇಶದಿಂದ ಪುತ್ತೂರು ನಗರ ಪೊಲೀಸ್‌ ಠಾಣೆ ವತಿಯಿಂದ ಜಾಗೃತಿ ಅಭಿಯಾನದ ಸರಣಿ ಕಾರ್ಯಕ್ರಮ ಶುಕ್ರವಾರ ಆರಂಭಗೊಂಡಿತು.
Vijaya Karnataka Web passengers in goods vehicles
ಸರಕು ವಾಹನಗಳಲ್ಲಿ ಕಾರ್ಮಿಕರ ಸಾಗಾಟ ತಡೆಗೆ ಜಾಗೃತಿ ಅಭಿಯಾನ


ಪುತ್ತೂರು ನಗರ ಠಾಣೆ ಇನ್‌ಸ್ಪೆಕ್ಟರ್‌ ಶಶಿಕುಮಾರ್‌ ನೇತೃತ್ವ ವಹಿಸಿದ್ದರು. ಆರಂಭದಲ್ಲಿ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ಕಚೇರಿಗೆ ತೆರಳಿದ ಪೊಲೀಸ್‌ ಅಧಿಕಾರಿಗಳ ತಂಡ, ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿಯಲ್ಲಿ ನಿಗಮದ ಎಲ್ಲ ಅಧಿಕಾರಿಗಳಿಗೆ ವಿಷಯ ಮನವರಿಕೆ ಮಾಡಿ ಸರಕಾರದ ಆದೇಶದ ಬಗ್ಗೆ ವಿವರಣೆ ನೀಡಿತು.

ನಗರದ ನಾನಾ ರಿಕ್ಷಾ ಪಾರ್ಕಿಂಗ್‌ ಪ್ರದೇಶಗಳಿಗೆ ತೆರಳಿ ಅಲ್ಲಿ ಚಾಲಕರಿಗೆ ಸಾಮೂಹಿಕವಾಗಿ ಮಾಹಿತಿ ನೀಡಲಾಯಿತು. ಶಾಲಾ ಕಾಲೇಜುಗಳು ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಅಧಿಕ ಪ್ರಮಾಣದ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಹೋಗಬಾರದು ಎಂದು ಸೂಚಿಸಲಾಯಿತು.

ಕಟ್ಟಡ ನಿರ್ಮಾಣ ಸಂಸ್ಥೆಗಳ ಮಾಲೀಕರು ಮತ್ತು ಗುತ್ತಿಗೆದಾರರ ಸಭೆ ನಡೆಸಿ ಕಾರ್ಮಿಕರನ್ನು ಸಾಗಿಸಲು ಸುರಕ್ಷಿತ ವಿಧಾನ ಅನುಸರಿಸುವಂತೆ ಮನವರಿಕೆ ಮಾಡಲಾಗುವುದು. ಸಾರಿಗೆ ವಾಹನಗಳಲ್ಲೇ ಕಾರ್ಮಿಕರು ಪ್ರಯಾಣಿಸುವಂತೆ ಖಾತ್ರಿಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಸರಕು ವಾಹನಗಳಲ್ಲಿ ಅವರು ಪ್ರಯಾಣಿಸಬಾರದು ಎಂದು ತಿಳಿಸಿ ನಿರ್ಮಾಣ ಸಂಸ್ಥೆಗಳ ಮಾಲೀಕರು, ಗುತ್ತಿಗೆದಾರರ ಪೂರ್ಣ ವಿವರ ಸಂಗ್ರಹಿಸಿ ಇಟ್ಟುಕೊಂಡು ನಿರಂತರ ಗಮನ ಹರಿಸಲಾಗುವುದು ಎಂದು ಪುತ್ತೂರು ನಗರ ಠಾಣೆ ಇನ್‌ಸ್ಪೆಕ್ಟರ್‌ ಶಶಿಕುಮಾರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ