ವಿಕ ಸುದ್ದಿಲೋಕ ಮಂಗಳೂರು
ಪಿಲಿಕುಳದ ಗುತ್ತು ಮನೆಯಲ್ಲಿ ವಿಜಯಾ ಬ್ಯಾಂಕ್, ಮಾಂಡೋವಿ ಮೋಟಾರ್ಸ್ ಪ್ರೈ.ಲಿ., ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ರೋಟರಿ ಕ್ಲಬ್ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಪಿಲಿಕುಳ ಆಟಿಕೂಟ ಆ.4ರಂದು ಬೆಳಗ್ಗೆ 10ಕ್ಕೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷ ಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲ್ ಅವರ ಸಾರಥ್ಯದಲ್ಲಿ ಯಕ್ಷ , ನೃತ್ಯ ಮತ್ತು ಹಾಸ್ಯ ವೈಭವ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಸದಸ್ಯರಿಂದ ಆಟಿ ಬಗೆ ಬಗೆಯ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ಹಾಗೂ ಸವಿ ಹಂಚಿಕೆಯ ಕಾರ್ಯಕ್ರಮವೂ ನಡೆಯಲಿದೆ.
ಮಧ್ಯಾಹ್ನ ಒಂದು ಗಂಟೆಗೆ ಪಿಲಿಕುಳ ವತಿಯಿಂದ ಆಟಿಯ ನಾನಾ ಬಗೆಯ ಖಾದ್ಯಗಳೊಂದಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಭೋಜನದ ಕೂಪನ್ಗಳನ್ನು ಮಂಗಳೂರಿನ ಮಿನಿವಿಧಾನ ಸೌಧದ ಹಿಂಭಾಗದ ಸರಕಾರಿ ನೌಕರರ ಭವನದ ಒಂದನೇ ಮಹಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಯಲ್ಲಿ, ಮಲ್ಲಿಕಟ್ಟೆ ಪರಂಪರಾ ಮಳಿಗೆಯಲ್ಲಿ ಹಾಗೂ ಪಿಲಿಕುಳದ ಮುಖ್ಯದ್ವಾರದ ಬಾಕ್ಸ್ ಆಫೀಸಿನಲ್ಲಿ ಇಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಕಟಣೆ ತಿಳಿಸಿದೆ.
ಪಿಲಿಕುಳದ ಗುತ್ತು ಮನೆಯಲ್ಲಿ ವಿಜಯಾ ಬ್ಯಾಂಕ್, ಮಾಂಡೋವಿ ಮೋಟಾರ್ಸ್ ಪ್ರೈ.ಲಿ., ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ರೋಟರಿ ಕ್ಲಬ್ ಮತ್ತು ಕಲ್ಕೂರ ಪ್ರತಿಷ್ಠಾನದ ಸಹಯೋಗದೊಂದಿಗೆ ಪಿಲಿಕುಳ ಆಟಿಕೂಟ ಆ.4ರಂದು ಬೆಳಗ್ಗೆ 10ಕ್ಕೆ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಯಕ್ಷ ಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲ್ ಅವರ ಸಾರಥ್ಯದಲ್ಲಿ ಯಕ್ಷ , ನೃತ್ಯ ಮತ್ತು ಹಾಸ್ಯ ವೈಭವ ಮತ್ತು ಮಂಗಳೂರು ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಸದಸ್ಯರಿಂದ ಆಟಿ ಬಗೆ ಬಗೆಯ ವಿಶೇಷ ತಿಂಡಿ ತಿನಿಸುಗಳ ಪ್ರದರ್ಶನ ಹಾಗೂ ಸವಿ ಹಂಚಿಕೆಯ ಕಾರ್ಯಕ್ರಮವೂ ನಡೆಯಲಿದೆ.
ಮಧ್ಯಾಹ್ನ ಒಂದು ಗಂಟೆಗೆ ಪಿಲಿಕುಳ ವತಿಯಿಂದ ಆಟಿಯ ನಾನಾ ಬಗೆಯ ಖಾದ್ಯಗಳೊಂದಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಭೋಜನದ ಕೂಪನ್ಗಳನ್ನು ಮಂಗಳೂರಿನ ಮಿನಿವಿಧಾನ ಸೌಧದ ಹಿಂಭಾಗದ ಸರಕಾರಿ ನೌಕರರ ಭವನದ ಒಂದನೇ ಮಹಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಯಲ್ಲಿ, ಮಲ್ಲಿಕಟ್ಟೆ ಪರಂಪರಾ ಮಳಿಗೆಯಲ್ಲಿ ಹಾಗೂ ಪಿಲಿಕುಳದ ಮುಖ್ಯದ್ವಾರದ ಬಾಕ್ಸ್ ಆಫೀಸಿನಲ್ಲಿ ಇಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಪ್ರಕಟಣೆ ತಿಳಿಸಿದೆ.