ಆ್ಯಪ್ನಗರ

ಕರ್ನಾಟಕ ಲಾಕ್‌ಡೌನ್: ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಪೊಲೀಸ್ ಲಾಠಿ ಏಟು

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸುಬ್ರಹ್ಮಣ್ಯದ ಅರ್ಚಕರಿಗೆ ಪೊಲೀಸರು ಲಾಠಿಯಲ್ಲಿ ಹಲ್ಲೆ ನಡೆಸಿದ್ದಾರೆ. ಶನಿವಾರ ದೇವಸ್ಥಾನಕ್ಕೆ ಬರುತ್ತಿದ್ದ ಇವರನ್ನು ಪೊಲೀಸರು ತಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿಲಾಗಿದೆ.

Vijaya Karnataka Web 29 Mar 2020, 5:26 pm
ಮಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿದ್ದು, ಮನೆಯಿಂದ ಹೊರಬಂದವರ ಮೇಲೆ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡುತ್ತಿದ್ದಾರೆ.
Vijaya Karnataka Web police attack


ನಿರ್ಬಂಧ ಸಂದರ್ಭದಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿರುವ ಶ್ರೀನಿವಾಸ್ ಎಂಬುವವರು ಶನಿವಾರ ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರು ಅಡ್ಡಗಟ್ಟಿ ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ.

ಊಟ ಸಿಗುತ್ತಿಲ್ಲವೇ ಈ ನಂಬರ್ ಗೆ ಕರೆಮಾಡಿ-155214

ಪೂಜೆಗೆ ತೆರಳುವುದಾಗಿ ದೇಗುಲದ ಕೀ ತೋರಿಸಿದರೂ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಲ್ಲೆಯಿಂದ ಗಾಯಗೊಂಡಿರುವ ಶ್ರೀನಿವಾಸ್‌ ಅವರ ಫೋಟೋ ವೈರಲ್ ಆಗಿದೆ.

ಈ ಪ್ರಕರಣವನ್ನು ಪ್ರಕಾಶ್ ಅಮ್ಮಣ್ಣಾಯ ಎಂಬುವವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಪೊಲೀಸರ ನಡೆಗೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಅರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಇದ್ದರೂ ಅವರನ್ನು ತಡೆದು ಹಲ್ಲೆ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿಗೆ ಬೇಕು ಕರ್ಫ್ಯೂ ಮಾದರಿ: ರಾಜಧಾನಿಗೆ ಕಠಿಣ ನಿರ್ಬಂಧ ಹಾಕದಿದ್ದರೆ ಕೈಮೀರೀತು ಹುಷಾರ್‌!

ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ ಡೌನ್ ಜಾರಿಯಲ್ಲಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಲಾಕ್‌ಡೌನ್‌ ಕಟ್ಟುನಿಟ್ಟುಗೊಳಿಸಲಾಗಿದೆ.

ಮನೆಯಿಂದ ಹೊರಬಂದವರ ಮೇಲೆ ಲಾಠಿ ಪ್ರಯೋಗ ಮಾಡಿದ ಹಲವು ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿದ್ದು, ಪೊಲೀಸರ ನಡೆಗೆ ಪರ ಹಾಗೂ ವಿರುದ್ಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ