ಆ್ಯಪ್ನಗರ

ಸಿದ್ದರಾಮಯ್ಯ 24 ಹಿಂದೂಗಳನ್ನು ಕೊಂದಿದ್ದಾರೆ ಎಂದಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲು!

Police FIR Against BJP MLA Harish Poonja : ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಪೊಲೀಸ್‌ ಪ್ರಕರಣ ದಾಖಲಾಗಿದೆ. ಸಿದ್ದರಾಮಯ್ಯ 24 ಹಿಂದೂಗಳನ್ನು ಕೊಂದಿದ್ದಾರೆ ಎಂದು ಶಾಸಕರು ಹೇಳಿಕೆ ನೀಡಿದ್ದರು. ಸದ್ಯ ಕಾಂಗ್ರೆಸ್‌ ಕಾರ್ಯಕರ್ತರ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

Authored by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 25 May 2023, 5:28 pm

ಹೈಲೈಟ್ಸ್‌:

  • ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪೊಲೀಸ್‌ ಎಫ್‌ಐಆರ್‌.
  • ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂಗಳನ್ನು ಕೊಂದಿದ್ದಾರೆ ಎಂದು ಹೇಳಿಕೆ ನೀಡಿದ್ದ ಶಾಸಕ.
  • ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಹರೀಶ್ ಪೂಂಜಾ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಶಾಸಕ ಹರೀಶ್‌ ಪೂಂಜಾ
ಶಾಸಕ ಹರೀಶ್‌ ಪೂಂಜಾ
ಮಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲಾಗಿದೆ.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ಹರೀಶ್ ಪೂಂಜಾ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆ ಮೇ 22 ರಂದು ಬೆಳ್ತಂಗಡಿಯಲ್ಲಿ ನಡೆದ ವಿಜಯೋತ್ಸವದ ಸಂದರ್ಭದಲ್ಲಿ " ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂಗಳನ್ನು ಕೊಂದಿದ್ದಾರೆ ” ಎಂದು ಹೇಳಿಕೆ ನೀಡಿದ್ದರು.

ಈ ವಿಡಿಯೋ ಮತ್ತು ಆಡಿಯೋ ತುಣುಕುಗಳು ಸಾಕಷ್ಟು ವೈರಲ್‌ ಆಗಿದ್ದವು. ಸಿದ್ದರಾಮಯ್ಯನವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ವಿಚಾರವಂತರು ಶಾಸಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಕಾರ್ಯಕರ್ತೆ ನೀಡಿದ್ದ ದೂರು

ಸದ್ಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ನಮಿತಾ ಕೆ ಪೂಜಾರಿ ಅವರು ನೀಡಿದ ದೂರಿನ ಮೇರೆಗೆ ಶಾಸಕ ಹರೀಶ್‌ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಶಾಸಕರು ಕೋಮುದ್ವೇಷ ಹರಡಿ ಸಮಾಜದಲ್ಲಿ ಶಾಂತಿ ಹಾಳು ಮಾಡಲು ಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ನಮೂದಿಸಲಾಗಿದೆ.

ಪ್ರಚಾರ ಸಂದರ್ಭದಲ್ಲಿಯೂ ವಿವಾದಾತ್ಮಕ ಹೇಳಿಕೆ

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಹಿಂದೂ ಕಾರ್ಯಕರ್ತರನ್ನು ಕಟುವಾಗಿ ಟೀಕಿಸಿದ್ದರು. 24 ಹಿಂದೂ ಕಾರ್ಯಕರ್ತರ ಹತ್ಯೆಗೆ ಕಾರಣರಾದ ಸಿದ್ದರಾಮಯ್ಯ ಅವರಿಗೆ ಮತ ಯಾಚಿಸಿದ್ದೀರಿ, ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಯಾಚಿಸಿದ್ದೀರಿ ಎಂದು ಭಾಷಣದಲ್ಲಿ ಆರೋಪಿಸಿದ್ದರು. ಭಾಷಣದ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ