ಆ್ಯಪ್ನಗರ

ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯ ಅಸ್ಥಿರತೆ ಕೊನೆಗೊಳ್ಳಲಿದೆ: ಯಡಿಯೂರಪ್ಪ

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ನಾಳೆ ಹೊರಹೊಮ್ಮಲಿದೆ. ಈ ಮೂಲಕ ರಾಜ್ಯದ ರಾಜಕೀಯ ಅಸ್ಥಿರತೆ ಕೊನೆಗೊಳ್ಳಲಿದೆ ಎಂದು ಯಡಿಯೂರಪ್ಪ ಘೋಷಿಸಿದರು. ಬೆಳ್ತಂಗಡಿ ತಾಲೂಕಿನ ಕಣಿಯೂರನ್ನು ಹೋಬಳಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

Vijaya Karnataka Web 8 Dec 2019, 5:46 pm
ಮಂಗಳೂರು: ವಿಧಾನಸಭೆ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದ ರಾಜಕೀಯ ಅಸ್ಥಿರತೆ ಕೊನೆಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Vijaya Karnataka Web bs yediyurappa


ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬೆಳ್ತಂಗಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ 347 ಕೋಟಿ ರೂ.ಗಳ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಯಡಿಯೂರಪ್ಪ ಮಾತನಾಡಿದರು.

ಮುಂದಿನ ಮೂರುವರೆ ವರ್ಷಗಳಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುವುದು. ಶಾಸಕರುಗಳು ಏನು ಅಪೇಕ್ಷೆ ಪಡುತ್ತಾರೆಯೋ ಅದನ್ನು ಪೂರ್ಣಗೊಳಿಸಿ ಮುಂದಿನ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲಲಾಗುವುದು ಎಂದು ಬಿಎಸ್‌ವೈ ನುಡಿದರು.

ಈ ಸುದ್ದಿ ಓದಿ: ಸೋಮವಾರ ಹಣೆಬರಹ ನಿರ್ಧಾರ - 'ಅನರ್ಹರ' ಎದೆಯಲ್ಲಿ ಢವ ಢವ

ಇನ್ನು, ಬೆಳ್ತಂಗಡಿ ತಾಲೂಕಿನ ಕಣಿಯೂರನ್ನು ಹೋಬಳಿ ಮಾಡುವುದಾಗಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದರು.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ 15ರಲ್ಲಿ ಬಿಜೆಪಿಗೆ 13 ಸ್ಥಾನ: ಬಿಎಸ್‌ವೈ ವಿಶ್ವಾಸ

ಡಿಸೆಂಬರ್ 5 ರಂದು 15 ಸ್ಥಾನಗಳಿಗೆ ಉಪ ಚುನಾವಣೆ ನಡೆದಿದ್ದು, ನಾಳೆ (ಡಿಸೆಂಬರ್ 9) ರಂದು ಮತ ಎಣಿಕೆ ನಡೆದು ಅನರ್ಹರ ಭವಿಷ್ಯ ಹೊರಹೊಮ್ಮಲಿದೆ. ಪ್ರಮುಖವಾಗಿ ಬಿಜೆಪಿ ಸರಕಾರದ ಅಳಿವು ಉಳಿವು ಸಹ ಈ ಉಪ ಚುನಾವಣೆಯಲ್ಲಿದ್ದು, 8 ಸ್ಥಾನಗಳಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಎದುರಾಗಿದೆ.

ಫಲಿತಾಂಶ ಬಂದ ಬಳಿಕ ಸಂಪುಟ ವಿಸ್ತರಣೆ, ಗೆದ್ದವರಿಗೆ ಸಚಿವ ಸ್ಥಾನ: ಡಾ. ಅಶ್ವತ್ಥನಾರಾಯಣ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ