ಆ್ಯಪ್ನಗರ

ಅತ್ಯಾಚಾರ ಆರೋಪಿಗಳಿಗೆ ಕಠಿಣ ಸಜೆ ಒತ್ತಾಯಿಸಿ ಪ್ರತಿಭಟನೆ

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು.

Vijaya Karnataka 6 Jul 2019, 5:00 am
ಬಂಟ್ವಾಳ: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್‌ ವತಿಯಿಂದ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು.
Vijaya Karnataka Web prtotest against gang rape
ಅತ್ಯಾಚಾರ ಆರೋಪಿಗಳಿಗೆ ಕಠಿಣ ಸಜೆ ಒತ್ತಾಯಿಸಿ ಪ್ರತಿಭಟನೆ


ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಕಾಲೇಜು ವಿದ್ಯಾರ್ಥಿನಿಯನ್ನು ಸಹಪಾಠಿಗಳೇ ಅತ್ಯಾಚಾರ ಮಾಡಿರುವುದು ಖಂಡನೀಯ. ಪ್ರತಿಬಾರಿ ಮಹಿಳೆಯರ ಮೇಲೆ ದೌರ್ಜನ್ಯಗಳಾದಾಗ ಧರ್ಮದ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಸಂಘಟನೆಗಳು ಮೌನವಾಗಿರುವುದು ಹಲವಾರು ಸಂದೇಹಕ್ಕೆ ಎಡೆಮಾಡಿ ಕೊಟ್ಟಿದೆ. ಪೊಲೀಸ್‌ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದರು.

ಕರ್ತವ್ಯದಲ್ಲಿದ್ದ ವೈದ್ಯೆಯ ಮೇಲೆ ಎಗರಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರ ವರ್ತನೆಯೂ ಖಂಡನೀಯ ಎಂದ ಅವರು, ಅತ್ಯಾಚಾರ ಆರೋಪಿಗಳ ಪರವಾಗಿ ಯಾವ ವಕೀಲರು ವಾದ ಮಾಡದಂತೆ ಮನವಿ ಮಾಡಿದರು.

ಪಕ್ಷ ಪ್ರಮುಖರಾದ ಬೇಬಿ ಕುಂದರ್‌, ಸುದೀಪ್‌ ಕುಮಾರ್‌ ಶೆಟ್ಟಿ, ಚಂದ್ರಪ್ರಕಾಶ್‌ ಶೆಟ್ಟಿ, ಪದ್ಮಶೇಖರ ಜೈನ್‌, ಎಂ.ಎಸ್‌. ಮಹಮ್ಮದ್‌, ರಾಜಶೇಖರ ನಾಯಕ್‌, ಐಡಾ ಸುರೇಶ್‌, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಲುಕ್ಮಾನ್‌, ಮಹಮ್ಮದ್‌ ನಂದರಬೆಟ್ಟು, ಸಂಜೀವ ಪೂಜಾರಿ, ಸಿದ್ದೀಕ್‌ ಗುಡ್ಡೆಯಂಗಡಿ, ಪ್ರಶಾಂತ್‌ ಕುಲಾಲ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ