ಆ್ಯಪ್ನಗರ

ಉದ್ಯಮಿಯಿಂದ ಹಣಕ್ಕೆ ಬೇಡಿಕೆಯಿಟ್ಟ ರೌಡಿಶೀಟರ್ಸ್‌ಗಳನ್ನು ಬಂಧಿಸಿದ ಪುತ್ತೂರು ಪೊಲೀಸರು

ಕಳೆದೊಂದು ವಾರದಿಂದ ಅಪರಿಚಿತ ವ್ಯಕ್ತಿ ಬೇರೆ ಬೇರೆ ಮೊಬೈಲ್‌ಗಳಿಂದ ಕರೆ ಮಾಡಿ 'ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು 13 ಲಕ್ಷ ರೂ. ಬೇಕಾಗುತ್ತದೆ. ನೀನು ಹಣ ಕೊಡಬೇಕು, ಎರಡು ದಿನದೊಳಗೆ 3.50 ಲಕ್ಷ ರೂ. ರೆಡಿ ಮಾಡಬೇಕು. ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ. ಈ ವಿಚಾರವನ್ನು ಇತರರಲ್ಲಿ ತಿಳಿಸಿದರೆ ನಿನ್ನ ಹೆಣ ಖಂಡಿತ ಬೀಳುತ್ತದೆ. ನೀನು ಜೀವಂತ ಬದುಕಲು ಸಾಧ್ಯವಿಲ್ಲ' ಎಂದು ಜೀವ ಬೆದರಿಕೆ ಒಡ್ಡಿರುವುದಾಗಿ ಉದ್ಯಮಿ ಅಬೂಬಕ್ಕರ್‌ ಮುಲಾರ್‌ ಜ.5ರಂದು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು.

Vijaya Karnataka 16 Jan 2022, 10:56 am
ಪುತ್ತೂರು: ಉದ್ಯಮಿಯೊಬ್ಬರಿಗೆ ವಿವಿಧ ಮೊಬೈಲ್‌ಗಳಿಂದ ಕರೆ ಮಾಡಿ ಬೆದರಿಕೆಯೊಡ್ಡಿ, ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದ ಇಬ್ಬರು ರೌಡಿಶೀಟರ್‌ಗಳನ್ನು ಗ್ರಾಮಾಂತರ ಠಾಣೆಯ ಎಸ್‌ಐ ಉದಯ ರವಿ ನೇತೃತ್ವದ ಪೊಲೀಸರ ತಂಡ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
Vijaya Karnataka Web Puttur Police


ಬಂಟ್ವಾಳ ತಾಲೂಕು ಗೋಳ್ತಮಜಲು ಕಲ್ಲಡ್ಕ ಮಸೀದಿ ಬಳಿ ನಿವಾಸಿ ಅಬ್ದುಲ್ಲಎಂಬವರ ಪುತ್ರ ಖಲಂದರ್‌ ಶರೀಫ್‌ ಶಾಫಿ ಹಾಗೂ ಮಂಗಳೂರು ಮಂಜನಾಡಿ ಕುಚ್ಚಿಗದ್ದೆ ಹಂಝ ಅವರ ಪುತ್ರ ಹಸನಬ್ಬ ಹಸನ್‌ ಅಚ್ಚು ಚುನ್‌ ಬಂಧಿತರು. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯ ನಿವಾಸಿ ದರ್ಬೆಯಲ್ಲಿರುವ ನಸೀಬ್‌ ಬೋರ್‌ವೆಲ್‌ ಮಾಲೀಕ ಅಬೂಬಕ್ಕರ್‌ ಮುಲಾರ್‌ ಅವರಿಗೆ ಕಳೆದೊಂದು ವಾರದಿಂದ ಅಪರಿಚಿತ ವ್ಯಕ್ತಿ ಬೇರೆ ಬೇರೆ ಮೊಬೈಲ್‌ಗಳಿಂದ ಕರೆ ಮಾಡಿ 'ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು 13 ಲಕ್ಷ ರೂ. ಬೇಕಾಗುತ್ತದೆ. ನೀನು ಹಣ ಕೊಡಬೇಕು, ಎರಡು ದಿನದೊಳಗೆ 3.50 ಲಕ್ಷ ರೂ. ರೆಡಿ ಮಾಡಬೇಕು. ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ. ಈ ವಿಚಾರವನ್ನು ಇತರರಲ್ಲಿ ತಿಳಿಸಿದರೆ ನಿನ್ನ ಹೆಣ ಖಂಡಿತ ಬೀಳುತ್ತದೆ. ನೀನು ಜೀವಂತ ಬದುಕಲು ಸಾಧ್ಯವಿಲ್ಲ' ಎಂದು ಜೀವ ಬೆದರಿಕೆ ಒಡ್ಡಿರುವುದಾಗಿ ಉದ್ಯಮಿ ಅಬೂಬಕ್ಕರ್‌ ಮುಲಾರ್‌ ಜ.5ರಂದು ಪುತ್ತೂರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಸುಲಿಗೆ ಪ್ರಕರಣದಲ್ಲಿ ಕುಖ್ಯಾತ ರೌಡಿ ಆಕಾಶಭವನ ಶರಣ್‌ ಸಹಿತ ಐವರನ್ನು ಬಂಧಿಸಿದ ಮಂಗಳೂರು ಸಿಸಿಬಿ
ಹಣದ ಬೇಡಿಕೆಯಿಟ್ಟ ಅಪರಿಚಿತರಿಗೆ ಉದ್ಯಮಿಯ ಮೂಲಕವೇ ಹಣ ನೀಡುವ ಕುರಿತು ಮಾತುಕತೆ ನಡೆಸಿ ಕುರಿಯ ಸಮೀಪವೇ ಹಣ ನೀಡುವ ಸ್ಥಳ ನಿಗದಿಪಡಿಸಿದ್ದರು. ಶುಕ್ರವಾರ ಅಪರಿಚಿತರು ಕಾರಿನಲ್ಲಿ ಬಂದು ಕುರಿಯ ಸಮೀಪ ಉದ್ಯಮಿಯಿಂದ ಹಣ ಪಡೆದು ಹೋಗುತ್ತಿದ್ದಂತೆ ಗ್ರಾಮಾಂತರ ಠಾಣಾ ಎಸ್‌ಐ ಉದಯ ರವಿ ನೇತೃತ್ವದ ತಂಡ ಆರೋಪಿಗಳನ್ನು ಸುತ್ತುವರಿದು ಬಂಧಿಸಿ ಉದ್ಯಮಿಯಿಂದ ವಸೂಲಿ ಮಾಡಿದ 50 ಸಾವಿರ ರೂ., ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳ ಪೈಕಿ ಕಲಂದರ್‌ ಶರೀಫ್‌ ಶಾಫಿ ಬಂಟ್ವಾಳ ನಗರ ಠಾಣೆಯಲ್ಲಿ ರೌಡಿಶೀಟರ್‌ ಆಗಿದ್ದು, ಹಸನಬ್ಬ ಹಸನ್‌ ಅಚ್ಚು ಅಚುನ್‌ ಮಂಗಳೂರು ನಗರದ ಕೊಣಾಜೆ ಠಾಣೆಯ ರೌಡಿಶೀಟರ್‌ ಅಲ್ಲದೆ ಕಂಕನಾಡಿ ಮತ್ತು ಉಳ್ಳಾಲ ಠಾಣೆಯಲ್ಲಿಈತನ ವಿರುದ್ಧ ದರೋಡೆ ಪ್ರಕರಣ ದಾಖಲಾಗಿದೆ.

ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕ ಹೃಷಿಕೇಶ್‌ ಸೋನಾವಣೆ ಮತ್ತು ಪುತ್ತೂರು ಉಪ ವಿಭಾಗ ಪೊಲೀಸ್‌ ಉಪಾಧೀಕ್ಷಕಿ ಡಾ. ಗಾನಾ ಪಿ. ಕುಮಾರ್‌ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್‌ ಉಪ್ಪಳಿಗೆ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಉದಯ ರವಿ, ಅಮೀನ್‌ ಸಾಬ್‌ ನಡೆಸಿದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಎಂ. ಅತ್ತಾರ್‌, ಕೃಷ್ಣಪ್ಪ, ದೇವರಾಜ್‌, ಆದ್ರಾಮ, ಪ್ರವೀಣ್‌ ರೈ, ಹರ್ಷಿತ್‌, ಗಾಯತ್ರಿ, ವಿನೋದ್‌ ಭಾಗವಹಿಸಿದ್ದರು. ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್‌, ದಿವಾಕರ್‌ ಸಹಕರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ