ಆ್ಯಪ್ನಗರ

ಪುತ್ತೂರು: ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಎಸ್‌ಡಿಪಿಐ ವಿರೋಧ, ಟಿಪ್ಪು ಫೋಟೊ ಹಾಕಲು ಪಟ್ಟು!

ದೇಶದಲ್ಲಿ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಆದರೆ ಪುತ್ತೂರಿನ ಕಬಕದಲ್ಲಿ ಸ್ವಾತಂತ್ರ್ಯದ ರಥಕ್ಕೆ ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದ ಘಟನೆ ವರದಿಯಾಗಿದೆ. ಸ್ವಾತಂತ್ರ್ಯ ರಥದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಲಾಗಿದ್ದು, ಅದನ್ನು ತೆಗೆದು ಟಿಪ್ಪು ಸುಲ್ತಾನ್ ಫೊಟೋ ಅಳವಡಿಸಬೇಕೆಂದು ಎಸ್ ಡಿ ಪಿಐ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Vijaya Karnataka Web 15 Aug 2021, 12:44 pm

ಹೈಲೈಟ್ಸ್‌:

  • ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೊಗೆ SDPI ವಿರೋಧ
  • ಟಿಪ್ಪು ಸುಲ್ತಾನ್‌ ಫೋಟೊ ಹಾಕುವಂತೆ ಪಟ್ಟು ಹಿಡಿದ ಎಸ್‌ಡಿಪಿಐ
  • ಪುತ್ತೂರು ತಾಲೂಕಿನ ಕಬಕ ಗ್ರಾಮ ಪಂಚಾಯತ್‌ನಲ್ಲಿ ಘಟನೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web 5e0aab82-185d-49dd-8209-d97e5f4de97c
ಪುತ್ತೂರು: ತಾಲೂಕಿನ ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ರಥಕ್ಕೆ ಕಬಕದಲ್ಲಿ ಎಸ್ ಡಿ ಪಿಐ ಕಾರ್ಯಕರ್ತರು ತಡೆಯೊಡ್ಡಿ ಧಿಕ್ಕಾರ ಕೂಗಿದ ಘಟನೆ ನಡೆಯಿತು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲಸಿದ್ದು ಪುತ್ತೂರು ನಗರ ಠಾಣಾ ಪೊಲೀಸರು ಬಂದು ಪರಿಸ್ಥಿತಿ ನಿಯಂತ್ರಿಸಿದರು.
ಈ ರಥದಲ್ಲಿ ವಿನಾಯಕ ದಾಮೋದರ ಸಾವರ್ಕರ್ ಅವರ ಭಾವಚಿತ್ರ ಅಳವಡಿಸಲಾಗಿದ್ದು, ಅದನ್ನು ತೆಗೆದು ಟಿಪ್ಪು ಸುಲ್ತಾನ್ ಫೊಟೋ ಅಳವಡಿಸಬೇಕೆಂದು ಎಸ್ ಡಿ ಪಿಐ ಕಾರ್ಯಕರ್ತರು ಆಗ್ರಹಿಸಿದರು ಎನ್ನಲಾಗಿದೆ. ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ವಿನಯ್‌ ಕುಮಾರ್‌ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್.ಡಿ.ಪಿ.ಐ. ಕಾರ್ಯಕರ್ತರು ದಿಕ್ಕಾರ ಕೂಗಿ ರಥಕ್ಕೆ ತಡೆಒಡ್ಡಿದರು.

ಈ ವೇಳೆ ಪರಸ್ಪರ ವಾಗ್ವಾದ ನಡೆದಿದ್ದು, ಗ್ರಾ.ಪಂ ಅಧ್ಯಕ್ಷರು ಹಾಗೂ ಪಿಡಿಒ ಸಮಾಧಾನ ಮಾಡಿದರು. ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ತಂಡ ಪಟ್ಟು ಹಿಡಿಯಿತು. ಪರಸ್ಪರ ವಾಗ್ವಾದ ನಡೆಯುತ್ತಿದ್ದಂತೆ ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ನೆತೃತ್ವದ ಪೊಲೀಸರ ತಂಡ ಆಗಮಿಸಿ ಪ್ರತಿಭಟನಾಕಾರರನ್ನು ಚದುರಿಸಿತು.

ತುಮಕೂರು: ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು, ಇಬ್ಬರಿಗೆ ಗಾಯ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ