ಆ್ಯಪ್ನಗರ

ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧೆ: ರಮಾನಾಥ ರೈ

ಹೈಕಮಾಂಡ್‌ ಅವಕಾಶ ನೀಡಿದರೆ, ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

Vijaya Karnataka Web 28 Jun 2018, 4:16 pm
ಬಂಟ್ವಾಳ: ಹೈಕಮಾಂಡ್‌ ಅವಕಾಶ ನೀಡಿದರೆ, ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
Vijaya Karnataka Web ramanath rai interested to contest loksabha
ಅವಕಾಶ ನೀಡಿದರೆ ಲೋಕಸಭೆಗೆ ಸ್ಪರ್ಧೆ: ರಮಾನಾಥ ರೈ


ಬಿ.ಸಿ. ರೋಡ್‌ನಲ್ಲಿರುವ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಪಕ್ಷ ದ ನಿಷ್ಠಾವಂತ ಕಾರ‍್ಯಕರ್ತನಾಗಿದ್ದು, ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧನಾಗಿದ್ದೇನೆ. ಪಕ್ಷ ವು ಈಗಾಗಲೇ ಪಾರ್ಲಿಮೆಂಟ್‌ ಚುನಾವಣೆಗೆ ಸಿದ್ಧವಾಗುತ್ತಿದ್ದು, ಟಿಕೆಟ್‌ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಇದರೊಂದಿಗೆ 2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಮಾನಾಥ ರೈ ಹೆಸರು ಸೇರ್ಪಡೆ ಆದಂತಾಗಿದೆ. ಕಳೆದ ಬಾರಿ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಲೋಕಸಭೆಗೆ ಸ್ಪರ್ಧಿಸಿದ್ದು, ಬಿಜೆಪಿಯ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಸೋಲು ಅನುಭವಿಸಿದ್ದರು. ಶತಾಯಗತಾಯ ಲೋಕಸಭೆಯ ದಕ್ಷಿಣ ಕನ್ನಡ ಕ್ಷೇತ್ರವನ್ನು ಬಿಜೆಪಿ ಕೈಯಿಂದ ಕಸಿದುಕೊಳ್ಳಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದ್ದು, ಈ ಹಿಂದೆಯೇ ರಮಾನಾಥ ರೈ ಹೆಸರು ಕೇಳಿಬಂದಿತ್ತು. ಆದರೆ ಅವರು ಎಲ್ಲೂ ಈ ಕುರಿತು ಬಹಿರಂಗವಾಗಿ ಹೇಳಿರಲಿಲ್ಲ. ಆದರೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರು ನೀವು ಈ ಬಾರಿಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಅವಕಾಶ ನೀಡಿದರೆ ನಿರಾಕರಿಸುವುದಿಲ್ಲ, ಆದರೆ ನಾನೆಂದೂ ಸ್ಪರ್ಧಿಸುತ್ತೇನೆ ಎಂದಿಲ್ಲ. ಪಕ್ಷ ವನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಘಟಿಸುತ್ತಿದ್ದು, ನಾನಾ ಮಟ್ಟದ ತಯಾರಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ಅನ್ನು ಹೈಕಮಾಂಡ್‌ ನೀಡಿದರೆ ಸ್ಪರ್ಧೆಗಿಳಿಯಲು ಸಿದ್ಧ ಎಂದು ಹೇಳುವ ಮೂಲಕ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಸುಮ್ಮನೆ ಕುಳಿತಿಲ್ಲ ಎಂದು ಪರೋಕ್ಷ ವಾಗಿ ತನ್ನ ವಿರೋಧಿಗಳಿಗೆ ಟಾಂಗ್‌ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ