ಆ್ಯಪ್ನಗರ

ಕರಾವಳಿಯಲ್ಲಿ ಏ.13ರಿಂದ ರಮ್ಜಾನ್‌ ಆಚರಣೆ

ಕೇರಳದ ಕಲ್ಲಿಕೋಟೆಯಲ್ಲಿ ಸೋಮವಾರ ರಮ್ಜಾನ್‌ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರಮ್ಜಾನ್‌ ತಿಂಗಳ ಉಪವಾಸ ಆಚರಿಸಲು ನಿರ್ಧರಿಸಲಾಗಿದೆ ಎಂದು ಖ್ವಾಝಿಗಳು ತಿಳಿಸಿದ್ದಾರೆ.

Vijaya Karnataka Web 12 Apr 2021, 11:35 pm
ಮಂಗಳೂರು/ಉಡುಪಿ: ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಏ.13ರಿಂದ ರಮ್ಜಾನ್‌ ತಿಂಗಳ ಉಪವಾಸ ಆರಂಭಗೊಳ್ಳಲಿದೆ.
Vijaya Karnataka Web ರಂಜಾನ್‌
ರಂಜಾನ್‌


ಕೇರಳದ ಕಲ್ಲಿಕೋಟೆಯಲ್ಲಿ ಸೋಮವಾರ ರಮ್ಜಾನ್‌ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ರಮ್ಜಾನ್‌ ತಿಂಗಳ ಉಪವಾಸ ಆಚರಿಸಲು ನಿರ್ಧರಿಸಲಾಗಿದೆ ಎಂದು ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್‌ ಮುಸ್ಲಿಯಾರ್‌ ಹಾಗೂ ಉಡುಪಿ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್‌ ಉಲಮಾ ಎಂ. ಅಬ್ದುಲ್‌ ಹಮೀದ್‌ ಮುಸ್ಲಿಯಾರ್‌ ಮಾಣಿ ಸೂಚಿಸಿದ್ದಾಗಿ ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್‌ ಅಧ್ಯಕ್ಷ ಹಾಜಿ ಪಿ. ಅಬೂ ಬಕ್ಕರ್‌ ನೇಜಾರು ಹಾಗೂ ಕಾರ್ಯದರ್ಶಿ ಹಾಜಿ ಎಂ.ಎ. ಬಾವು ಮೂಳೂರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ