ಆ್ಯಪ್ನಗರ

ಬ್ಯಾರಿ ಭವನ ನಿರ್ಮಾಣಕ್ಕೆ 3 ಕೋಟಿ ಬಿಡುಗಡೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಬ್ಯಾರಿ ಭವನ ನಿರ್ಮಾಣಕ್ಕೆ ಸರಕಾರ 6 ಕೋಟಿ ರೂ. ಮಂಜೂರಾತಿ ನೀಡಿದ್ದು, ಈ ಸಾಲಿನಲ್ಲಿ3 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದರು.

Vijaya Karnataka 11 Dec 2019, 5:00 am
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗೆ ಬ್ಯಾರಿ ಭವನ ನಿರ್ಮಾಣಕ್ಕೆ ಸರಕಾರ 6 ಕೋಟಿ ರೂ. ಮಂಜೂರಾತಿ ನೀಡಿದ್ದು, ಈ ಸಾಲಿನಲ್ಲಿ3 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದರು.
Vijaya Karnataka Web release of rs 3 crore for the construction of byari bhavan
ಬ್ಯಾರಿ ಭವನ ನಿರ್ಮಾಣಕ್ಕೆ 3 ಕೋಟಿ ಬಿಡುಗಡೆ


ಮಂಗಳೂರಿನ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿಮಂಗಳವಾರ ಪತ್ರಿಕಾಗೋಷ್ಠಿಯಲ್ಲಿಮಾತನಾಡಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಯೋಜನೆ ಅನುಷ್ಠಾನಗೊಳಿಸಲು 4105.35 ಲಕ್ಷ ರೂ. ಮಂಜೂರು ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದು, ಒಟ್ಟು 83 ಕಾಮಗಾರಿಗಳಿಗೆ ಅಧಿಕೃತ ಪಟ್ಟಿಯನ್ನು ಸರಕಾರ ಬಿಡುಗಡೆ ಮಾಡಿದೆ. ಅದರಲ್ಲಿಬ್ಯಾರಿ ಭವನ ಜತೆಯಲ್ಲಿತುಳು, ಕೊಂಕಣಿ ಅಕಾಡೆಮಿಗಳಿಗೂ ಅನುದಾನ ನೀಡಲಾಗಿದೆ ಎಂದರು. ಈಗಾಗಲೇ ಮಂಗಳೂರಿನ ನೀರುಮಾರ್ಗ ಸಮೀಪ 25 ಸೆಂಟ್ಸ್‌ ಜಮೀನನ್ನು ಸರಕಾರ ಅಕಾಡೆಮಿಗೆ ನೀಡಿದ್ದು, ಈ ಜಾಗದಲ್ಲಿಸುಸಜ್ಜಿತ ಸುಂದರ ಬ್ಯಾರಿ ಭವನ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿ, ಇಲಾಖೆಯ ಸಚಿವರು, ಸಂಸದರು ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿಶಂಕುಸ್ಥಾಪನೆ ಕಾರ್ಯಕ್ರಮ ಶೀಘ್ರವೇ ನಡೆಯಲಿದೆ ಎಂದರು. ಅಕಾಡೆಮಿಗೆ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದೆರಡು ದಿನಗಳಲ್ಲಿಸದಸ್ಯರ ಪಟ್ಟಿ ಬಿಡುಗಡೆಯಾಗಲಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಆರನೇ ತರಗತಿಯಿಂದ ಪಿಯುಸಿ ತನಕ ತೃತೀಯ ಭಾಷೆಯಾಗಿ ಬ್ಯಾರಿ ಭಾಷೆಯನ್ನು ಅನುಮೋದಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 12 ಗಣ್ಯರನ್ನೊಳಗೊಂಡ ಪಠ್ಯ ಪುಸ್ತಕ ರಚನಾ ಸಮಿತಿ ರಚಿಸಲಾಗಿದ್ದು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಕೇಂದ್ರದ ನಿರ್ದೇಶಕರ ಅಧ್ಯಕ್ಷತೆಯಲ್ಲಿಪ್ರಥಮ ಸುತ್ತಿನ ಸಭೆ ನಡೆಸಲಾಗಿತ್ತು. ಸಭೆಯಲ್ಲಿಕೈಗೊಂಡ ನಿರ್ಣಯವನ್ನು ರಾಜ್ಯ ಶಿಕ್ಷಣ ಇಲಾಖೆ ಆಯುಕ್ತರಿಗೆ ಸರಕಾರದ ಅನುಮೋದನೆ ಗಾಗಿ ರವಾನಿಸಲಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ