ಆ್ಯಪ್ನಗರ

ರೌಡಿ ಚಟುವಟಿಕೆ ನಡೆಸುವವರ ಮೇಲೆ ನಿಗಾಯಿಡಿ: ಕಮಿಷನರ್‌

ಮಂಗಳೂರು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 150 ಮಂದಿಯ ಪಟ್ಟಿತಯಾರಿಸಲಾಗಿದ್ದು, ಇವರ ಬಗ್ಗೆ ವಿಶೇಷ ನಿಗಾಯಿಡುವಂತೆ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ಸೂಚನೆ ನೀಡಿದ್ದಾರೆ.

Vijaya Karnataka 19 Jul 2019, 5:00 am
ಮಂಗಳೂರು: ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ 150 ಮಂದಿಯ ಪಟ್ಟಿತಯಾರಿಸಲಾಗಿದ್ದು, ಇವರ ಬಗ್ಗೆ ವಿಶೇಷ ನಿಗಾಯಿಡುವಂತೆ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ಸೂಚನೆ ನೀಡಿದ್ದಾರೆ.
Vijaya Karnataka Web report on rowdy activists commissioner
ರೌಡಿ ಚಟುವಟಿಕೆ ನಡೆಸುವವರ ಮೇಲೆ ನಿಗಾಯಿಡಿ: ಕಮಿಷನರ್‌


ರೌಡಿಶೀಟರ್‌ಗಳ ಬಗ್ಗೆ ಎಲ್ಲ ಇನ್‌ಸ್ಪೆಕ್ಟರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಮಾಹಿತಿ ಕಲೆ ಹಾಕಲು ಪೊಲೀಸ್‌ ಕಮಿಷನರ್‌ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿ ಠಾಣೆಯಲ್ಲಿ 10ರಷ್ಟು ಮಂದಿಯ ಪಟ್ಟಿ ಮಾಡಲಾಗಿದ್ದು, ಒಟ್ಟು 150 ಮಂದಿಯ ಪಟ್ಟಿ ತಯಾರಿಸಲಾಗಿದೆ.

ಕಮಿಷನರ್‌ ಕಚೇರಿಯಲ್ಲಿ ಎಲ್ಲ ಸಹಾಯಕ ಪೊಲೀಸರು ಮತ್ತು ಇನ್‌ಸ್ಪೆಕ್ಟರ್‌ಗಳ ಸಭೆ ಬುಧವಾರ ನಡೆಸಿದ ಕಮಿಷನರ್‌ ರೌಡಿ ಚಟುವಟಿಕೆಯಲ್ಲಿ ತೊಡಗಿರುವವರ ಮೇಲೆ ವಿಶೇಷ ನಿಗಾಯಿಡುವಂತೆ ಖಡಕ್‌ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ