ಆ್ಯಪ್ನಗರ

ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

ಬೈಕಂಪಾಡಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 12 Aug 2019, 5:00 am
ಮಂಗಳೂರು: ಬೈಕಂಪಾಡಿ ಬಳಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ದರೋಡೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಪಣಂಬೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web robbery two arrested
ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಸೆರೆ


ಕಸಬ ಬೆಂಗರೆ ತೌಹೀದ್‌ ಮಂಜಿಲ್‌ ನಿವಾಸಿ ಸರ್ಫರಾಜ್‌ (28) ಹಾಗೂ ಕಸಬ ಬೆಂಗ್ರೆಯ ಸೈಯದ್‌ ಅಫ್ರಿದ್‌ ಯಾನೆ ಕುಡಿಯ ಅಪ್ಪಿ (21) ಬಂಧಿತರು. ಅವರಿಂದ ಕೃತ್ಯಕ್ಕೆ ಬಳಸಿದ ನಂಬರ್‌ ಪ್ಲೇಟ್‌ ಇಲ್ಲದ ಗ್ರೇ ಬಣ್ಣದ ಆಕ್ಟಿವಾ ಸ್ಕೂಟರ್‌, ತಲವಾರು ಮತ್ತು ಕಬ್ಬಿಣದ ರಾಡ್‌ ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿದ ಒಟ್ಟು ಮೌಲ್ಯ 68 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಆಗಸ್ಟ್‌ 9ರಂದು ಆರೋಪಿಗಳು ಬೈಕಂಪಾಡಿಯ ಕಾವೇರಿ ಫೋರ್ಡ್‌ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್‌ ಹಾಗೂ ಹ್ಯಾಂಡ್‌ ಬ್ಯಾಗ್‌ ಕಸಿದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸ್‌ ಆಯುಕ್ತ ಡಾ.ಪಿ.ಎಸ್‌.ಹರ್ಷ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮೇ ಗಣೇಶ್‌ ಮಾರ್ಗದರ್ಶನದಲ್ಲಿ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಪಣಂಬೂರು ಇನ್‌ಸ್ಪೆಕ್ಟರ್‌ ಅಜ್ಮತ್‌ ಆಲಿ, ಪಿಎಸ್‌ಐ ಎಂ.ಎನ್‌.ಉಮೇಶ್‌ ಕುಮಾರ್‌ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ