ಆ್ಯಪ್ನಗರ

ಬಿಜೆಪಿಯಲ್ಲೀಗ ಸಂಘಟನಾ ಪರ್ವ: ನಳಿನ್‌

ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಮಹತ್ವದ ಜವಾಬ್ದಾರಿಯನ್ನು ಪಕ್ಷವು ನನಗೆ ನೀಡಿದೆ. ಈ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಮತ್ತಷ್ಟು ಬೆಳೆಸುವುದರೊಂದಿಗೆ ಅಭಿವೃದ್ಧಿಗೂ ಆದ್ಯತೆ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

Vijaya Karnataka 16 Sep 2019, 5:00 am
ಮೂಡುಬಿದಿರೆ: ಪಕ್ಷ ಸಂಘಟನೆಯ ನಿಟ್ಟಿನಲ್ಲಿಮಹತ್ವದ ಜವಾಬ್ದಾರಿಯನ್ನು ಪಕ್ಷವು ನನಗೆ ನೀಡಿದೆ. ಈ ಜವಾಬ್ದಾರಿಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಮತ್ತಷ್ಟು ಬೆಳೆಸುವುದರೊಂದಿಗೆ ಅಭಿವೃದ್ಧಿಗೂ ಆದ್ಯತೆ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
Vijaya Karnataka Web saanghatana parva in bjp says nalin
ಬಿಜೆಪಿಯಲ್ಲೀಗ ಸಂಘಟನಾ ಪರ್ವ: ನಳಿನ್‌


ಕಾರ್ಕಳಕ್ಕೆ ತೆರಳುವ ಹಾದಿಯಲ್ಲಿರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಮೂಡುಬಿದಿರೆಗೆ ಭೇಟಿ ನೀಡಿ ಇಲ್ಲಿನ ಹಳೆ ಪೊಲೀಸ್‌ ಠಾಣೆಯ ಬಳಿ ಪಕ್ಷದ ಪ್ರಮುಖರಿಂದ ಸ್ವಾಗತ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.

ಯಾವುದೇ ವ್ಯಕ್ತಿಯ ಮೇಲೆ ಆರೋಪಗಳು ಬಂದಾಗ ಅವುಗಳನ್ನು ಎದುರಿಸಬೇಕು. ಕಾನೂನಿಗೆ, ನ್ಯಾಯಾಲಯಕ್ಕೆ, ಸಂವಿಧಾನಕ್ಕೆ ಗೌರವ ಕೊಡಬೇಕೇ ಹೊರತು ಬೀದಿಯಲ್ಲಿನಿಂತು ಹೋರಾಟ ಮಾಡುವುದಲ್ಲ. ರಾಜ್ಯ ಸರಕಾರ ನೆರೆ ನಿರಾಶ್ರಿತರಿಗೆ ಅತ್ಯುತ್ತಮ ಪರಿಹಾರ ನೀಡಲಿದೆ ಎಂದರು.

ಪಕ್ಷದ ಪ್ರಮುಖರಾದ ಕೆ.ಪಿ.ಜಗದೀಶ ಅಧಿಕಾರಿ, ಮೇಘನಾಥ ಶೆಟ್ಟಿ, ಸುದರ್ಶನ ಎಂ, ಬಾಹುಬಲಿ ಪ್ರಸಾದ್‌, ಕೆ.ಕೃಷ್ಣರಾಜ ಹೆಗ್ಡೆ, ಶಾಂತಿಪ್ರಸಾದ್‌ ಹೆಗ್ಡೆ, ರಾಜೇಶ್‌ ಮಲ್ಯ, ಪುರಸಭೆ ಚುನಾಯಿತ ಪ್ರತಿನಿಧಿಗ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ