ಆ್ಯಪ್ನಗರ

ಸಾಮೂಹಿಕ ಶ್ರೀಗುರುಪಾದ ಪೂಜೆ

ಧರ್ಮದ ಮಾರ್ಗದಲ್ಲಿ ನಡೆದರೆ ಮಾತ್ರ ಬದುಕಿನಲ್ಲಿ ಶ್ರೇಷ್ಠತೆ ಗಳಿಸಲು ಸಾಧ್ಯ ಎಂದು ಶ್ರೀಮತ್‌ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನಮ್‌ ಸರಸ್ವತೀ ಪೀಠದ ಜಗದ್ಗುರು ಶ್ರೀಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ ನುಡಿದರು.

Vijaya Karnataka 18 Dec 2018, 5:00 am
ಪುತ್ತೂರು: ಧರ್ಮದ ಮಾರ್ಗದಲ್ಲಿ ನಡೆದರೆ ಮಾತ್ರ ಬದುಕಿನಲ್ಲಿ ಶ್ರೇಷ್ಠತೆ ಗಳಿಸಲು ಸಾಧ್ಯ ಎಂದು ಶ್ರೀಮತ್‌ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನಮ್‌ ಸರಸ್ವತೀ ಪೀಠದ ಜಗದ್ಗುರು ಶ್ರೀಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಜಿ ನುಡಿದರು.
Vijaya Karnataka Web samuhika srigurupada puje
ಸಾಮೂಹಿಕ ಶ್ರೀಗುರುಪಾದ ಪೂಜೆ


ಪುತ್ತೂರು ದ.ಕ.ಜಿಲ್ಲಾ ವಿಶ್ವಕರ್ಮ ಹಿತರಕ್ಷ ಣಾ ಸಂಘ ವತಿಯಿಂದ ಬೊಳುವಾರು ಶ್ರೀವಿಶ್ವಕರ್ಮ ಸಭಾಭವನದಲ್ಲಿ ನಡೆದ ಸಾಮೂಹಿಕ ಶ್ರೀಗುರುಪಾದ ಪೂಜೆ ಮತ್ತು ಸಾಮೂಹಿಕ ಶ್ರೀದುರ್ಗಾ ನಮಸ್ಕಾರ ಪೂಜೆಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಉದ್ಯಮಿ ಧನಂಜಯ ಆಚಾರ್ಯ ಮಾತನಾಡಿ, ವಿಶ್ವಕರ್ಮರ ಋುಷಿ ಪರಂಪರೆ ಎಲ್ಲ ಪರಂಪರೆಗಿಂತಲೂ ಅತಿ ಪುರಾತನ ಮೂಲವಾಗಿದೆ. ತಮ್ಮ ಮಕ್ಕಳನ್ನು ಸಣ್ಣ ಪ್ರಾಯದಲ್ಲಿಯೇ ಸಮಾಜಮುಖಿ ಕಾರ್ಯಗಳಿಗೆ ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದರು.

ಕಾವು ವಿಜಯ ಬ್ಯಾಂಕ್‌ನ ಪ್ರಬಂಧಕ ಎಸ್‌.ಪ್ರಕಾಶ್‌ ಆಚಾರ್ಯ ಮಾತನಾಡಿ, ವಿಶ್ವಕರ್ಮ ಸಮುದಾಯವು ಶೈಕ್ಷ ಣಿಕ ಸಾಧನೆಗಳ ಜತೆ ಸಾಮಾಜಿಕವಾಗಿ ಬೆಳೆಯಬೇಕು ಎಂದರು.

ಜಿಲ್ಲಾ ವಿಶ್ವಕರ್ಮ ಹಿತರಕ್ಷ ಣಾ ಸಂಘದ ಗೌರವಾಧ್ಯಕ್ಷ ನಲ್ಕ ಗೋಪಾಲಕೃಷ್ಣ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಶ್ರೀಗುರು ಸೇವಾ ಸಮಿತಿ ಪುತ್ತೂರು ವಲಯದ ಅಧ್ಯಕ್ಷ ಪುರುಷೋತ್ತಮ ಆಚಾರ್ಯ ಕೊಕ್ಕಡ, ಜಿಲ್ಲಾ ವಿಶ್ವಕರ್ಮ ಹಿತರಕ್ಷ ಣಾ ಸಂಘದ ಗೌರವ ಸಲಹೆಗಾರ ಹರಿಶ್ಚಂದ್ರ ಆಚಾರ್ಯ ಇಳಂತಿಲ, ಪ್ರಧಾನ ಕಾರ್ಯದರ್ಶಿ ಸಂಜೀವ ಆಚಾರ್ಯ ಕೆ.ಆರ್‌. ಉಪಸ್ಥಿತರಿದ್ದರು.

ಸಂಘದ ಗೌರವ ಸಲಹೆಗಾರ ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಕೋಶಾಧಿಕಾರಿ ಸಂತೋಷ್‌ ಆಚಾರ್ಯ ವಂದಿಸಿದರು. ಸಂಘದ ಗೌರವ ಸಲಹೆಗಾರ ಉದಯಕುಮಾರ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ವಿಶ್ವೇಶ್ವರ ಪುರೋಹಿತರ ಆಚಾರ್ಯತ್ವದಲ್ಲಿ ನಾನಾ ವೈದಿಕ ಕಾರ್ಯಕ್ರಮಗಳು ಜರುಗಿತು. ಕಾರ್ಯಕ್ರಮದಲ್ಲಿ ನಾನಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ