ಆ್ಯಪ್ನಗರ

ಅನಾರೋಗ್ಯದಿಂದ ಪತ್ರಕರ್ತ ಚಂದ್ರೇಶ್ ಗೋರಡ್ಕ ನಿಧನ

ಕಳೆದೊಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೊನೆಗೂ ಚೇತರಿಸಿಕೊಳ್ಳಲೇ ಇಲ್ಲ.

Vijaya Karnataka Web 26 Aug 2019, 7:58 am
ಮಂಗಳೂರು: ಸುಳ್ಯದ ಹಿರಿಯ ಪತ್ರಕರ್ತರಾಗಿದ್ದ ಚಂದ್ರೇಶ್ ಗೋರಡ್ಕ(48) ಭಾನುವಾರ ರಾತ್ರಿ 2.30 ಕ್ಕೆ ನಿಧನರಾದರು. ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾದ ಅವರನ್ನು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Vijaya Karnataka Web Gordaka


ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 3 ವಾರ ಚಿಕಿತ್ಸೆ ಪಡೆದ ಅವರ ಲಿವರ್ ಡ್ಯಾಮೇಜ್ ಹಾಗೂ ಕಿಡ್ನಿ ವೈಫಲ್ಯಗೊಂಡಿದ್ದುದರಿಂದ ವೈದ್ಯರ ಸಲಹೆ ಮೇರೆಗೆ ವಾರದ ಹಿಂದೆ ಹಿಂತಿರುಗಿ ಕರೆತಂದು ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಂದ್ರೇಶ್ 'ಸುದ್ದಿ ಬಿಡುಗಡೆ' ಪತ್ರಿಕೆಯ ಮೂಲಕ ತಮ್ಮ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಪಯಸ್ವಿನಿ ಪತ್ರಿಕೆ ಸಂಪಾದಕರಾಗಿ, ಬಳಿಕ ಸುಳ್ಯದಲ್ಲಿದ್ದ ಶ್ರೀ ಚಾನೆಲ್ ಕಾರ್ಯನಿರ್ವಾಹಕರಾಗಿ ದುಡಿದಿದ್ದರು. ಕೆಲವು ವರ್ಷಗಳಿಂದ ಪತ್ರಿಕಾ ವೃತ್ತಿಯಿಂದ ದೂರವಾಗಿ ಬೇರೆ ವೃತ್ತಿ ಮಾಡುತ್ತಿದ್ದರು. ಪುಸ್ತಕ ವ್ಯಾಪಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಅವರ ಪತ್ರಿಕಾ ಸೇವೆಯನ್ನು ಗುರುತಿಸಿ ಕಳೆದ ಜುಲೈ ತಿಂಗಳಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂದರ್ಭ ಕಾರ್ಯನಿರತ ಪತ್ರಕರ್ತರ ಸಂಘ ಸನ್ಮಾನಿಸಿತ್ತು.

ಮಂಗಳವಾರ ಸನ್ಮಾನ ಸ್ವೀಕರಿಸಿದ್ದ ಚಂದ್ರೇಶ್ ಗೋರಡ್ಕ ನಂತರದ ಭಾನುವಾರ ಆಸ್ಪತ್ರೆಗೆ ಸೇರಿದ್ದರು.

ಪತ್ನಿ , ಇಬ್ಬರು ಪುತ್ರರು , ಮೂವರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅವರು ಅಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ