ಆ್ಯಪ್ನಗರ

ಮಂಗಳೂರಿನಲ್ಲೊಂದು ಭೀಕರ ಅಪಘಾತ-ಬೆಚ್ಚಿಬೀಳಿಸುತ್ತೆ ಸಿಸಿ ಟಿವಿ ದೃಶ್ಯ

ಮಂಗಳೂರಿನಲ್ಲೊಂದು ಭೀಕರ ಅಪಘಾತ ನಡೆದಿದ್ದು ಐವರು ಗಾಯಗೊಂಡಿದ್ದಾರೆ. ಕಾರೊಂದು ನಿಯಂತ್ರಣ ತಪ್ಪಿ ಮಸೀದಿಯ ಆವರಣಕ್ಕೆ ನುಗ್ಗಿದೆ. ಈ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ

Vijaya Karnataka Web 22 Oct 2019, 5:45 pm
ದಕ್ಷಿಣ ಕನ್ನಡ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಸೀದಿಗೆ ನುಗ್ಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆ ಬಳಿ ಈ ಘಟನೆ ನಡೆದಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಿ.ಸಿ.ರೋಡ್‌ನಿಂದ ಮಂಗಳೂರಿನ ಕಡೆ ಬರುತ್ತಿದ್ದ ಮಾರುತಿ ಓಮ್ನಿ ಕಾರು ನಿಯಂತ್ರಣ ತಪ್ಪಿ ವೇಗವಾಗಿ ಮಸೀದಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ತ್ವಾಹಾ ಜುಮ್ಮಾ ಮಸೀದಿಯ ಒಳಗೆ ಕಾರು ನುಗ್ಗಿ ಗೋಡೆಗೆ ಏರಿ ನಿಂತಿದ್ದು ಘಟನೆಯಲ್ಲಿ ಮಸೀದಿ ಆವರಣದಲ್ಲಿದ್ದ ಇಬ್ಬರು ಸೇರಿದಂತೆ ಒಟ್ಟು ಐವರು ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ. ದಿಢೀರನೆ ರಸ್ತೆ ಎಡಭಾಗದಲ್ಲಿದ್ದ ಮಸೀದಿಗೆ ಕಾರು ನುಗ್ಗಿದೆ. ಮಸೀದಿಗೆ ಪ್ರಾರ್ಥನೆಗೆ ಬರುತ್ತಿದ್ದ ಇಸ್ಮಾಯಿಲ್ ಎಂಬುವವರಿಗೆ ಕಾರು ಡಿಕ್ಕಿ ಹೊಡೆದಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿದ್ದ ಮತ್ತೋರ್ವ ವ್ಯಕ್ತಿ ಸುಲೈಮಾನ್ ಹಾಗೂ ಕಾರಿನಲ್ಲಿದ್ದ ಮೂವರು ಪ್ರಯಾಣಿಕರೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದುಬಂದಿದೆ.

ಈ ಭೀಕರ ಅಪಘಾತ ಮಸೀದಿ ಆವರಣದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯ ಕುರಿತಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ