ಆ್ಯಪ್ನಗರ

ಲೈಂಗಿಕ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ ಶೀಘ್ರ ವಿಶೇಷ ನ್ಯಾಯಾಲಯ: ಮಾಧುಸ್ವಾಮಿ

ಅನೇಕ ಪ್ರಕರಣಗಳಲ್ಲಿ ಒಂದು ಸಾವಿರ ರೂ. ದಂಡ ಕಟ್ಟಿದರೆ ಸಾಕು ಎಂಬ ಉಲ್ಲೇಖವಿದೆ. ಹೀಗಾಗಿ ಅನೇಕ ಪ್ರಕರಣಗಳು ದಂಡ ಪಾವತಿಗೆ ಸೀಮಿತವಾಗಿವೆ. ಭಾರತೀಯ ದಂಡ ಸಂಹಿತೆಯಲ್ಲಿರುವ ಇಂತಹ ಕೆಲವು ಸೆಕ್ಷನ್‌ಗಳನ್ನು ಬದಲಾಯಿಸುವ ಅಗತ್ಯವಿದೆ ಎಂದು ಮಾಧುಸ್ವಾಮಿ ಹೇಳಿದರು.

Vijaya Karnataka 7 Dec 2019, 6:57 pm
ಪುತ್ತೂರು (ದಕ್ಷಿಣ ಕನ್ನಡ): ಮಹಿಳೆ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಕಾರ್ಯ ನಡೆಯುತ್ತಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
Vijaya Karnataka Web JC Madhuswamy


ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಪೋಕ್ಸೊ ಕಾಯಿದೆ ಕುರಿತಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

“ದೇಶದಲ್ಲಿ ಪ್ರತಿದಿನ ನೂರಾರು ಲೈಂಗಿಕ ದೌರ್ಜನ್ಯ ನಡೆಯುತ್ತದೆ ಎಂಬ ವರದಿಯಿದೆ. ಹೀಗಿರುವಾಗ ಐಪಿಸಿ, ಸಿಆರ್‌ಪಿಸಿಯಡಿ ಪ್ರಕರಣಗಳ ತ್ವರಿತ ವಿಲೇವಾರಿ ಅಸಾಧ್ಯ ಎಂಬ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯುವ ಉದ್ದೇಶದಿಂದ ಪೊಕ್ಸೋ ಕಾಯಿದೆಯಂತಹ ಕಠಿಣ ಕಾನೂನು ಜಾರಿಗೆ ಬಂದಿದೆ. ತ್ವರಿತವಾಗಿ ನ್ಯಾಯ ವಿಚಾರಣೆ ನಡೆದು ಅಪರಾಧಿಗಳಿಗೆ ಶಿಕ್ಷೆ ಆಗುತ್ತದೆ ಎಂಬ ಖಾತರಿ ಇದ್ದಾಗ ಜನ ಅದರ ಮೇಲೆ ವಿಶ್ವಾಸವಿಡುತ್ತಾರೆ. ಯಾವಾಗ ಈ ವಿಶ್ವಾಸ ಇರುವುದಿಲ್ಲವೋ ಆಗ ಆರೋಪಿಗಳು ಎನ್‌ಕೌಂಟರ್‌ನಲ್ಲಿ ಸತ್ತಾಗ ಅದನ್ನು ಸಂಭ್ರಮಿಸುತ್ತಾರೆ. ಈ ಮೂಲಕ ನ್ಯಾಯ ಸಿಕ್ಕಿತು ಎಂದುಕೊಳ್ಳುತ್ತಾರೆ. ಇಂತಹ ಸ್ಥಿತಿಗೆ ನಾವು ಇಂದು ತಲುಪಿದ್ದೇವೆ,” ಎಂದರು.

ಅನೇಕ ಪ್ರಕರಣಗಳಲ್ಲಿ ಒಂದು ಸಾವಿರ ರೂ. ದಂಡ ಕಟ್ಟಿದರೆ ಸಾಕು ಎಂಬ ಉಲ್ಲೇಖವಿದೆ. ಹೀಗಾಗಿ ಅನೇಕ ಪ್ರಕರಣಗಳು ದಂಡ ಪಾವತಿಗೆ ಸೀಮಿತವಾಗಿವೆ. ಭಾರತೀಯ ದಂಡ ಸಂಹಿತೆಯಲ್ಲಿರುವ ಇಂತಹ ಕೆಲವು ಸೆಕ್ಷನ್‌ಗಳನ್ನು ಬದಲಾಯಿಸುವ ಅಗತ್ಯವಿದೆ ಎಂದು ಮಾಧುಸ್ವಾಮಿ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ