ಆ್ಯಪ್ನಗರ

ಮಂಗಳೂರಿನಲ್ಲಿ ಮಳೆಗಾಗಿ ವಿಶೇಷ ನಮಾಝ್

ಧರ್ಮ ಗುರು ಶೇಖ್ ಸಾಕಿಬ್ ಸಲೀಂ ಉಮ್ರಿ ಅವರು ನಮಾಝ್ ಮತ್ತು ಪ್ರವಚನ ನೆರವೇರಿಸಿ, ಆಕಾಶದಿಂದ ಮಳೆ, ಬೆಳೆ, ಗಾಳಿ, ಬೆಳಕು, ಅನ್ನಾಹಾರ ಸೇರಿದಂತೆ ಎಲ್ಲವನ್ನೂ ಸೃಷ್ಟಿಕರ್ತ ಅಲ್ಲಾಹನೇ ಕೊಡುತ್ತಾನೆ. ಇದನ್ನೆಲ್ಲಾ ಪಡೆಯುವ ಜನರು ದೇವನಿಗೆ ಕೃತಘ್ನರಾದಾಗ ಅತಿವೃಷ್ಟಿ, ಅನಾವೃಷ್ಟಿಗಳಾಗುತ್ತವೆ. ದೇವರಲ್ಲಿ ಪಾಪ ವಿಮೋಚನೆಗಾಗಿ ಶುದ್ಧ ಮನಸ್ಸಿನಿಂದ ಪ್ರಾರ್ಥಿಸಿದಾಗ ದೇವರು ನಮ್ಮ ಮೇಲೆ ಕರುಣೆ ತೋರುತ್ತಾನೆ ಎಂದರು.

Vijaya Karnataka Web 15 May 2019, 3:30 pm
ಮಂಗಳೂರು: ಸೌತ್ ಕರ್ನಾಟಕ ಸಲಫಿ ಮೂವ್‌ಮೆಂಟ್ ಆಶ್ರಯದಲ್ಲಿ ಮುಸ್ಲಿಂ ಸಮುದಾಯದಿಂದ ಮಳೆಗಾಗಿ ಸಾಮೂಹಿಕ ವಿಶೇಷ ನಮಾಝ ಮತ್ತು ಪ್ರಾರ್ಥನೆ ನಗರದ ನೆಹರು ಮೈದಾನದಲ್ಲಿ ಬುಧವಾರ ನಡೆಯಿತು.
Vijaya Karnataka Web Namaz for Rain


ಧರ್ಮ ಗುರು ಶೇಖ್ ಸಾಕಿಬ್ ಸಲೀಂ ಉಮ್ರಿ ಅವರು ನಮಾಝ್ ಮತ್ತು ಪ್ರವಚನ ನೆರವೇರಿಸಿ, ಆಕಾಶದಿಂದ ಮಳೆ, ಬೆಳೆ, ಗಾಳಿ, ಬೆಳಕು, ಅನ್ನಾಹಾರ ಸೇರಿದಂತೆ ಎಲ್ಲವನ್ನೂ ಸೃಷ್ಟಿಕರ್ತ ಅಲ್ಲಾಹನೇ ಕೊಡುತ್ತಾನೆ. ಇದನ್ನೆಲ್ಲಾ ಪಡೆಯುವ ಜನರು ದೇವನಿಗೆ ಕೃತಘ್ನರಾದಾಗ ಅತಿವೃಷ್ಟಿ, ಅನಾವೃಷ್ಟಿಗಳಾಗುತ್ತವೆ. ದೇವರಲ್ಲಿ ಪಾಪ ವಿಮೋಚನೆಗಾಗಿ ಶುದ್ಧ ಮನಸ್ಸಿನಿಂದ ಪ್ರಾರ್ಥಿಸಿದಾಗ ದೇವರು ನಮ್ಮ ಮೇಲೆ ಕರುಣೆ ತೋರುತ್ತಾನೆ ಎಂದರು.

ಜಗತ್ತಿನಲ್ಲಿ ದಾನ ಧರ್ಮಗಳನ್ನು ಮಾಡದೆ, ತೂಕ ಅಳತೆಯಲ್ಲಿ ಮೋಸ, ಅನ್ಯಾಯ, ಅಕ್ರಮಗಳನ್ನು ಮಾಡಿ, ಮಾನವೀಯತೆ ಮರೆತಾಗಲೆಲ್ಲಾ ಮಳೆ ಕೊರತೆಯಾದ, ಹೆಚ್ಚಿನ ಮಳೆಯಿಂದ ಜಲಪ್ರಳಯವಾದ ಉದಾಹರಣೆಗಳಿವೆ. ಮಳೆ ಇಲ್ಲದೆ ನೀರಿನ ಕೊರತೆಯಿಂದ ಮನುಷ್ಯ ಮಾತ್ರವಲ್ಲ, ಪ್ರಾಣಿ, ಪಕ್ಷಿ, ಜೀವ ಜಂತು, ಮರ ಗಿಡ ಸಹಿತ ಇಡೀ ಜೀವ ಸಂಕುಲವೇ ಸಂಕಷ್ಟದಲ್ಲಿದೆ. ದೇವರು ನೀಡುವ ನೀರನ್ನು ಪೋಲು ಮಾಡದೆ, ಜಾಗ್ರತೆ ವಹಿಸಬೇಕು ಎಂದು ಇಸ್ಲಾಮ್ ಕಲಿಸುತ್ತದೆ. ಇದನ್ನು ಪಾಲಿಸುವುದು ಎಲ್ಲರ ಜವಾಬ್ದಾರಿ ಎಂದರು.

ಮಳೆಗಾಗಿ ನಮಾಜ್


ಎಸ್‌ಕೆಎಸ್‌ಎಂನ ಎಂ.ಜಿ.ಮೊಹಮ್ಮದ್ ಮಾತನಾಡಿ, ಮಳೆ ಇಲ್ಲದ ಬರಗಾಲದ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ ವಿಶೇಷ ನಮಾಝ್, ಪ್ರವಚನ, ಪ್ರಾರ್ಥನೆ ಮಾಡಿದ್ದರು. ಜನರು ಅಕ್ರಮ, ಅನ್ಯಾಯದಲ್ಲಿ ತೊಡಗಿದಾಗ ಇಂಥ ಪ್ರಕೃತಿ ವೈಪರೀತ್ಯಗಳು ಬರುತ್ತಿದ್ದು, ಅದರ ನಿವಾರಣೆಗೆ ಪ್ರಾರ್ಥನೆ ಮಾಡಬೇಕೆಂದು ಪ್ರವಾದಿ ಹೇಳಿದ ಮಾದರಿಯಲ್ಲಿ ನಾವು ಪ್ರಾರ್ಥನೆ ಮಾಡಿದ್ದೇವೆ ಎಂದರು.

ಶಾಸಕ ವೇದವ್ಯಾಸ ಡಿ.ಕಾಮತ್ ಉಪಸ್ಥಿತರಿದ್ದರು. ರಮ್ಜಾನ್ ಉಪವಾಸ ಸಂದರ್ಭದಲ್ಲಿ ಬೆಳ್ಳಂಬೆಳಗ್ಗೆ ನಡೆದ ಪ್ರಾರ್ಥನೆಯಲ್ಲಿ ಹಿರಿಯರು, ಕಿರಿಯರು, ಮಹಿಳೆಯರು ಕೂಡಾ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ