ಆ್ಯಪ್ನಗರ

ಸೆ.19ರಂದು ರಾಜ್ಯಾದ್ಯಂತ ಇ-ಲೋಕ ಅದಾಲತ್‌: ನ್ಯಾ. ಅರವಿಂದ ಕುಮಾರ್‌

ರಾಜ್ಯದ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಇ-ಲೋಕ ಅದಾಲತ್‌ನ್ನು ಸೆ.19ರಂದು ರಾಜ್ಯಾದ್ಯಂತ ನಡೆಸಲಾಗುವುದು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷ ನ್ಯಾಯಾಧೀಶ ಅರವಿಂದ ಕುಮಾರ್‌ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶುಕ್ರವಾರ ಜಿಲ್ಲಾಕೇಂದ್ರಗಳಿಗೆ ತಿಳಿಸಿದರು.

Vijaya Karnataka Web 28 Aug 2020, 9:54 pm
ಮಂಗಳೂರು: ರಾಜ್ಯದ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಇ-ಲೋಕ ಅದಾಲತ್‌ನ್ನು ಸೆ.19ರಂದು ರಾಜ್ಯಾದ್ಯಂತ ನಡೆಸಲಾಗುವುದು ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಾಧ್ಯಕ್ಷ ನ್ಯಾಯಾಧೀಶ ಅರವಿಂದ ಕುಮಾರ್‌ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಶುಕ್ರವಾರ ಜಿಲ್ಲಾ ಕೇಂದ್ರಗಳಿಗೆ ತಿಳಿಸಿದರು.
Vijaya Karnataka Web lok adalath


ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋಟಾರ್‌ ವಾಹನ, ಚೆಕ್‌ ಅಮಾನ್ಯ ಪ್ರಕರಣ, ವಿಮಾ ಪ್ರಕರಣ, ಕೌಟುಂಬಿಕ ಸಮಸ್ಯೆಗಳ ಪ್ರಕರಣಗಳ ಬಗ್ಗೆ ಅದಾಲತ್‌ ನಡೆಯಲಿದೆ. ನ್ಯಾಯಾಲಯಕ್ಕೆ ಕಕ್ಷಿದಾರರು ನೇರವಾಗಿ ಹಾಜರಾಗದೆ ವಕೀಲರ ಮೂಲಕ ಅಥವಾ ಸ್ವತಃ ಮೊಬೈಲ್‌ ದೂರವಾಣಿ ಮೂಲಕ ಭಾಗವಹಿಸಬಹುದಾಗಿದೆ ಎಂದರು.

ಮತ್ತೆ ಏರುಗತಿ ಕಂಡ ಕೊರೊನಾ ವೈರಸ್‌: 10 ಸಾವಿರ ಸಮೀಪಿಸುತ್ತಿದೆ ದಿನದ ಸೋಂಕು!

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹೈಕೋರ್ಟ್‌ ನ್ಯಾಯಾಧೀಶರಾದ ನ್ಯಾ. ಅಲೋಕ್‌ ಅರಾದೆ, ನ್ಯಾ. ಅಭಯ ಶ್ರೀನಿವಾಸ್‌, ಮಂಗಳೂರು ಜಿಲ್ಲಾನ್ಯಾಯಾಲಯದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಮುರಳೀಧರ ಪೈ, ಜಿಲ್ಲಾಕಾನೂನು ಸೇವಾ ಪ್ರಾಧಿಕಾರದ ಸದಸ್ಯರಾದ ಶಿಲ್ಪಾ ಮತ್ತಿತರರು ಉಪಸ್ಥಿತರಿದ್ದರು.

ಮಾನ್ಸೂನ್‌ ಅಧಿವೇಶನಕ್ಕೂ ಮುನ್ನ ಎಲ್ಲ ಸಂಸದರ ಕೋವಿಡ್‌ ಟೆಸ್ಟ್‌ ಕಡ್ಡಾಯ: ಸ್ಪೀಕರ್‌ ಆದೇಶ

ದ.ಕ.ದಲ್ಲಿ 2 ಸಾವಿರ ಪ್ರಕರಣಗಳಿಗೆ ಮುಕ್ತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 2 ಸಾವಿರ ಪ್ರಕರಣಗಳನ್ನು ಈ ಮೆಗಾ ಇ-ಅದಾಲತ್‌ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಸುಮಾರು 52 ಸಾವಿರ ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ. ಈ ಪೈಕಿ ಸುಮಾರು 15 ಸಾವಿರ ಪ್ರಕರಣಗಳು ಲೋಕ ಅದಾಲತ್‌ ಮೂಲಕ ಬಗೆಹರಿಸಬಹುದಾಗಿದೆ. ಜಿಲ್ಲೆ, ತಾಲೂಕು ಮಟ್ಟದಲ್ಲಿಯೂ ಇ-ಅದಾಲತ್‌ ನಡೆಯಲಿದೆ ಎಂದು ದ.ಕ. ಜಿಲ್ಲಾ ಸತ್ರ ನ್ಯಾಯಾಧೀಶ ನ್ಯಾ. ಮುರಳೀಧರ ಪೈ ವಿಕಕ್ಕೆ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ