ಆ್ಯಪ್ನಗರ

ಬೈಕ್ ಅಪಘಾತದಲ್ಲಿ ವಿದ್ಯಾರ್ಥಿ ಸಾವು: ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ನಗರದ ಬಿಜೈ ಬಳಿ ಬೈಕ್ ಸ್ಕಿಡ್‌ನಿಂದಾಗಿ ಗಂಭೀರ ಗಾಯಗೊಂಡ ನಗರದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಮನಗರ ಜಿಲ್ಲೆಯ ಕುಶಾಲ್ ಕುಮಾರ್ (19) ಮೃತಪಟ್ಟ ವಿದ್ಯಾರ್ಥಿ.

Vijaya Karnataka Web 14 Mar 2020, 1:21 pm
ಮಂಗಳೂರು: ನಗರದ ಬಿಜೈ ಬಳಿ ಬೈಕ್ ಸ್ಕಿಡ್‌ನಿಂದಾಗಿ ಗಂಭೀರ ಗಾಯಗೊಂಡ ನಗರದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ರಾಮನಗರ ಜಿಲ್ಲೆಯ ಕುಶಾಲ್ ಕುಮಾರ್ (19) ಮೃತಪಟ್ಟ ವಿದ್ಯಾರ್ಥಿ.
Vijaya Karnataka Web bike accident in mangalore


ಗುರುವಾರ ಬೆಳಗ್ಗೆ ಕುಶಾಲ್ ಅವರು ತನ್ನ ಪಿಜಿಯಿಂದ ಬೈಕ್‌ನಲ್ಲಿ ಜಿಮ್‌ಗೆ ಹೋಗುತ್ತಿದ್ದಾಗ ಬಿಜೈ-ಕೆಎಸ್ಸಾರ್ಟಿಸಿ ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ. ಇದರ ಪರಿಣಾಮ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ಕೂಡಲೇ ಸ್ಥಳೀಯರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಅಂಗಾಂಗ ದಾನ: ಕುಶಾಲ್ ಕುಮಾರ್ ಕುಟುಂಬ ಗುರುವಾರವೇ ಮಂಗಳೂರಿಗೆ ಆಗಮಿಸಿದೆ. ಮೃತಪಟ್ಟ ವಿದ್ಯಾರ್ಥಿಯ ಕಿಡ್ನಿ, ಕಣ್ಣು ಸೇರಿದಂತೆ ಇತರ ಅಂಗಾಂಗಗಳನ್ನು ದಾನ ಮಾಡಲು ಅವರ ಕುಟುಂಬ ನಿರ್ಧರಿಸಿದೆ. ಬೆಂಗಳೂರು ವೈದ್ಯರ ತಂಡ ಶುಕ್ರವಾರ ರಾತ್ರಿ ಮಂಗಳೂರಿಗೆ ಆಗಮಿಸಿ ಅಂಗಾಂಗ ದಾನ ಪ್ರಕ್ರಿಯೆ ಮುಗಿಸಿದೆ.

ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದ ಹೆಬ್ಬಾವಿಗೆ ಆಪರೇಷನ್: ತಮಿಳುನಾಡಲ್ಲಿ ವಿನೂತನ ಪ್ರಯತ್ನ..!

ಮರಣೋತ್ತರ ಪರೀಕ್ಷೆ: ಮೃತದೇಹದ ಮರಣೋತ್ತರ ಪ್ರಕ್ರಿಯೆ ನಡೆಯುತ್ತಿದ್ದು, ಬಳಿಕ ದೇಹವನ್ನು ಕುಟುಂಬಿಕರಿಗೆ ಹಸ್ತಾಂತರಿಸಲು ನಿರ್ಧರಿಸಲು ನಿರ್ಧರಿಸಲಾಗಿದೆ.
ಕುಶಾಲ್ ತಂದೆ ರಾಮನಗರದಲ್ಲಿ ವಕೀಲರಾಗಿದ್ದಾರೆ. ತಾಯಿ, ಅಕ್ಕ-ತಂಗಿ ಇದ್ದಾರೆ.
ನಗರದ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ