ಆ್ಯಪ್ನಗರ

ಪುತ್ತೂರು: ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಠಿಣ ಕ್ರಮ ಎಚ್ಚರಿಕೆ

ಪುತ್ತೂರು ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್‌ರೇಪ್‌ ಪ್ರಕರಣ ಇಡೀ ನಾಡಿನೆಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಸ್ಥಳೀಯ ಆಡಳಿತ ಕೆಲವು ಕ್ರಮಕ್ಕೆ ಮುಂದಾಗಿದೆ.

Vijaya Karnataka Web 15 Jul 2019, 7:40 pm
ಪುತ್ತೂರು: ಕಾಲೇಜ್ ಕ್ಯಾಂಪಸ್‌ನಲ್ಲಿ ಮತ್ತು ಅದರ ಸುತ್ತಮುತ್ತಲಿನ ಅಂಗಡಿಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಸಿಕ್ಕರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತರಾದ ಎಚ್.ಕೆ. ಕೃಷ್ಣಮೂರ್ತಿ ಹೇಳಿದ್ದಾರೆ.
Vijaya Karnataka Web ಮೊಬೈಲ್‌
ಮೊಬೈಲ್‌


ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಹಂತದ ದಾಳಿಯಲ್ಲಿ ಎಚ್ಚರಿಕೆ ನೀಡುವ ಕ್ರಮ ಮಾತ್ರ ಕೈಗೊಳ್ಳಲಾಗುತ್ತದೆ. ಎರಡನೇ ಹಂತದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ವಿರುದ್ಧ ವಿಶೇಷ ಜಾಗೃತಿ ಅಭಿಯಾನ ಆರಂಭವಾಗಿದೆ. ಎಚ್ಚರಿಕೆ ನೀಡುವ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮೊದಲ ಹಂತದಲ್ಲಿ ಅನಿರೀಕ್ಷಿತ ದಾಳಿ ನಡೆಸಲಾಗುತ್ತಿದೆ. ಪರಿಸರದ ಅಂಗಡಿಗಳಿಗೂ ದಾಳಿ ನಡೆಸಲಾಗಿದೆ. ಇಲ್ಲಿ ವಶಪಡಿಸಿಕೊಂಡಿರುವ ಮೊಬೈಲ್‌ಗಳನ್ನು ವಾರಸುದಾರರಿಗೆ ನೀಡಲಾಗುವುದು. ಮುಂದಿನ ಹಂತದ ದಾಳಿ ವೇಳೆ ಅಂಗಡಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಕೈಯಲ್ಲಿ ಮೊಬೈಲ್ ಸಿಕ್ಕಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪೋಷಕರು ಮಕ್ಕಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅಧಿಕಾರಿಯೊಬ್ಬರನ್ನು ಶೀಘ್ರ ನೇಮಕ ಮಾಡಲಾಗುವುದು. ಇದಲ್ಲದೆ ಶಾಲಾ ಕಾಲೇಜುಗಳಲ್ಲಿ ಸಮಾಲೋಚನಾ ಸಮಿತಿ ರಚನೆ ನಡೆಯುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬಹುತೇಕ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಆದರೆ ಇಲ್ಲಿ ಅನುದಾನದ ಲಭ್ಯತೆ ನೋಡಿಕೊಂಡು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳು ಮತ್ತು ಮಕ್ಕಳ ಸಂಖ್ಯೆಯ ವಿಚಾರದಲ್ಲಿ ಕೆಲವೊಂದು ಸಮಸ್ಯೆಗಳಿರುವುದು ನಿಜ. ಮಕ್ಕಳ ಸಂಖ್ಯೆಯ ಮಿತಿ ಏರಿಸಲು ಆಟೋರಿಕ್ಷಾದವರು ಮನವಿ ಮಾಡಿದ್ದಾರೆ. ಈ ಬಗ್ಗೆ ಡಿವೈಎಸ್ಪಿ, ಸಾರಿಗೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತಿತರ ಸಂಬಂಧಿತ ಅಧಿಕಾರಿಗಳ ಸಭೆಯನ್ನು ಜುಲೈ 20ರಂದು ಕರೆಯಲಾಗಿದೆ ಎಂದು ಕೃಷ್ಣಮೂರ್ತಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ