ಆ್ಯಪ್ನಗರ

ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ

ಪುತ್ತೂರು ನಗರದ ಹೊರವಲಯ ಚಿಕ್ಕಮುಡ್ನೂರು ಗ್ರಾಮದ ಕೇಪುಳು ಎಂಬಲ್ಲಿ ಉತ್ತರ ಕರ್ನಾಟಕ ಮೂಲದ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ...

Vijaya Karnataka 30 Nov 2018, 5:00 am
ಪುತ್ತೂರು : ನಗರದ ಹೊರವಲಯ ಚಿಕ್ಕಮುಡ್ನೂರು ಗ್ರಾಮದ ಕೇಪುಳು ಎಂಬಲ್ಲಿ ಉತ್ತರ ಕರ್ನಾಟಕ ಮೂಲದ ಕಾರ್ಮಿಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web news/mangaluru/sucide
ನೇಣು ಬಿಗಿದು ಕಾರ್ಮಿಕ ಆತ್ಮಹತ್ಯೆ


ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪೊನ್ನಕೊಪ್ಪ ನಿವಾಸಿ ಶಂಕರಪ್ಪ(60) ಆತ್ಮಹತ್ಯೆ ಮಾಡಿಕೊಂಡವರು.

ಕೇಪುಳು ನಿವಾಸಿಯೊಬ್ಬರ ತೋಟದಲ್ಲಿ ಕೆಲವು ವರ್ಷ ಹಿಂದೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಅವರು ನಂತರ ಕೆಲಸ ಬಿಟ್ಟು ಊರಿಗೆ ಮರಳಿದ್ದರು. ಈ ನಡುವೆ ಮತ್ತೆ ಪುತ್ತೂರಿಗೆ ಬಂದಿದ್ದು, ಕಾರ್ಮಿಕನಾಗಿಯೇ ಕೆಲಸ ಮಾಡುತ್ತಿದ್ದರು. ಗುರುವಾರ ಇದೇ ಪರಿಸರದ ತೋಟದ ಪಕ್ಕದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸದಾಳುವೊಬ್ಬರು ದನ ಮೇಯಿಸಲೆಂದು ಗುಡ್ಡೆಯ ಕಡೆಗೆ ಹೋಗುತ್ತಿದ್ದಾಗ ಮರದಲ್ಲಿ ಶವ ನೇತಾಡುತ್ತಿರುವುದು ಕಂಡು ಬಂತು.

ಈ ಬಗ್ಗೆ ಮೃತರ ಪುತ್ರ ರಾಜೇಶ್‌ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಡಿತದ ಚಟ ಹೊಂದಿದ್ದ ಶಂಕರಪ್ಪ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ