ಆ್ಯಪ್ನಗರ

ಸುರೇಂದ್ರ ಬಂಟ್ವಾಳ್‌ ಹತ್ಯೆ: ಐವರು ಆರೋಪಿಗಳಿಗೆ ಪೊಲೀಸ್‌ ಕಸ್ಟಡಿ

ಬಂಟ್ವಾಳದ ಭಂಡಾರಬೆಟ್ಟು ಎಂಬಲ್ಲಿನ ಅಪಾರ್ಟ್‌ ಮೆಂಟ್‌ ಒಂದರಲ್ಲಿ ತುಳು ಚಿತ್ರ ನಟ ಸುರೇಂದ್ರ ಬಂಟ್ವಾಳ್‌ ಸೋಫಾದ ಮೇಲೆ ಬರ್ಬರವಾಗಿ ಕೊಲೆಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 30 Oct 2020, 10:02 am
ಬಂಟ್ವಾಳ: ಬಂಟ್ವಾಳ ಭಂಡಾರಿಬೆಟ್ಟು ಬಳಿಯ ವಸತಿ ಸಂಕೀರ್ಣದಲ್ಲಿ ಅ. 20ರಂದು ನಡೆದ ಚಿತ್ರನಟ ಸುರೇಂದ್ರ ಬಂಟ್ವಾಳ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
Vijaya Karnataka Web ಸುರೇಂದ್ರ ಬಂಟ್ವಾಳ


ಬಂಟ್ವಾಳದ ಅಮ್ಟಾಡಿ ಗ್ರಾಮದ ಅಜೆಕಲ ನಿವಾಸಿ ಸತೀಶ್‌ ಕುಲಾಲ್‌, ನೀರುಮಾರ್ಗ ಬೊಂಡಂತಿಲ ನಿವಾಸಿ ಗಿರೀಶ್‌, ವೆಂಕಪ್ಪ ಯಾನೆ ವೆಂಕಟೇಶ್‌, ಪ್ರದೀಪ್‌ ಯಾನೆ ಪಪ್ಪು ಹಾಗೂ ಶರೀಫನ್ನು ಬಂಧಿಸಲಾಗಿದೆ.
ಸುರೇಂದ್ರ ಬಂಟ್ವಾಳ್ ಹತ್ಯೆ, ಮೂರು ತಂಡಗಳಲ್ಲಿ ತನಿಖೆ: ಎಸ್‌ಪಿ ಡಾ. ಲಕ್ಷ್ಮೀಪ್ರಸಾದ್‌

ಇವರಿಗೆ ಐದು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ದ.ಕ.ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್‌ ಹಾಗೂ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್‌ ಡಿಸೋಜಾ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಪೊಲೀಸ್‌ ಸರ್ಕಲ್‌ ಇನ್ಸ್ಪೆಕ್ಟರ್‌ ಟಿ.ಡಿ.ನಾಗರಾಜ್‌ ಅವರು ಪ್ರಕರಣದ ತನಿಖೆ ನಡೆಸುತ್ತಿದ್ದು, ಎಸ್ಐಗಳಾದ ಪ್ರಸನ್ನ, ಕಲೈಮಾರ್‌, ಅವಿನಾಶ್‌, ನಂದಕುಮಾರ್‌, ವಿನೋದ್‌, ರಾಜೇಶ್‌, ಪಿಐ ರವಿ ಮತ್ತು ಡಿಸಿಐಬಿ ಸಿಬ್ಬಂದಿಗಳನ್ನು ಒಳಗೊಂಡ ಒಟ್ಟು 5 ವಿಶೇಷ ಪತ್ತೆ ತಂಡಗಳನ್ನು ರಚಿಸಲಾಗಿತ್ತು.
ಮಂಗಳೂರು: ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ್‌ ಬರ್ಬರ ಹತ್ಯೆ!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಹತ್ಯೆಯ ಹಿಂದಿರುವ ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ