ಆ್ಯಪ್ನಗರ

ದುಷ್ಕರ್ಮಿಗಳನ್ನು ಮಟ್ಟ ಹಾಕಲು ಸಂಸದ ನಳಿನ್‌ ಸೂಚನೆ

ಫೋರಂ ಮಾಲ್‌ನಲ್ಲಿಹಿಂದೂ ಯುವಕನ ಮೇಲೆ ದುಷ್ಕರ್ಮಿಗಳು ನಡೆಸಿದ ಗಂಭೀರ ಹಲ್ಲೆಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯಲ್ಲಿಶಾಂತಿ ಕದಡಲು ಯತ್ನಿಸುತ್ತಿರುವ ಇಂತಹ ಸಮಾಜಘಾತಕರನ್ನು ಮಟ್ಟ ಹಾಕಲು ಪೊಲೀಸರು ಎಲ್ಲರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ ನೀಡಿದ್ದಾರೆ.

Vijaya Karnataka 27 Sep 2019, 4:05 pm
ಮಂಗಳೂರು: ನಗರದ ಫೋರಂ ಮಾಲ್‌ನಲ್ಲಿಹಿಂದೂ ಯುವಕನ ಮೇಲೆ ದುಷ್ಕರ್ಮಿಗಳು ನಡೆಸಿದ ಗಂಭೀರ ಹಲ್ಲೆಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯಲ್ಲಿಶಾಂತಿ ಕದಡಲು ಯತ್ನಿಸುತ್ತಿರುವ ಇಂತಹ ಸಮಾಜಘಾತಕರನ್ನು ಮಟ್ಟ ಹಾಕಲು ಪೊಲೀಸರು ಎಲ್ಲರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸೂಚನೆ ನೀಡಿದ್ದಾರೆ.
Vijaya Karnataka Web take strict action says nalin
ದುಷ್ಕರ್ಮಿಗಳನ್ನು ಮಟ್ಟ ಹಾಕಲು ಸಂಸದ ನಳಿನ್‌ ಸೂಚನೆ


ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೆಲವು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಇದರ ಹಿಂದೆ ಜಿಲ್ಲೆಯಲ್ಲಿಶಾಂತಿ ಕದಡುವ ಒಂದು ಜಾಲವಿದೆ ಎನ್ನುವ ಶಂಕೆ ಇದೆ. ಹಿಂದೂ ಯುವತಿಯರನ್ನು ಚುಡಾಯಿಸುವ, ಹಿಂದೂ ರಾಷ್ಟ್ರ ಎಂದು ಹೇಳಿದಾಗ ಹಲ್ಲೆ ನಡೆಸುವ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ. ಈ ಹಿಂದೆ ಕಾಂಗ್ರೆಸ್‌ ಸರಕಾರ ಇರುವಾಗ ಹಿಂದೂ ಯುವಕರ ಕಗ್ಗೊಲೆ, ಹಿಂದೂ ಸಂಘಟನೆಗಳನ್ನು ದಮನಿಸುವ ಕಾರ್ಯ ನಡೆದಿತ್ತು. ಬಿಜೆಪಿ ಸರಕಾರದಲ್ಲಿಇದಕ್ಕೆ ಅವಕಾಶ ನೀಡುವುದಿಲ್ಲ. ಅಶಾಂತಿ ಸೃಷ್ಟಿಸಲು ಯತ್ನಿಸುವ ಸಮಾಜಘಾತಕ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಬದ್ಧವಾಗಿದೆ ಎಂದು ಸಂಸದರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ