ಆ್ಯಪ್ನಗರ

ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ: ಪ್ರಕರಣ ರದ್ದಗೊಳಿಸಲು ಕೋರ್ಟ್ ನಿರಾಕರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾದ ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ ಪ್ರಕರಣವನ್ನು ರದ್ದುಪಡಿಸಲು ಸಲ್ಲಿಸಿದ ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.

Bangalore Mirror Bureau 9 Mar 2018, 3:54 pm
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುಗಲಭೆಗೆ ಕಾರಣವಾದ ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ ಪ್ರಕರಣವನ್ನು ರದ್ದುಪಡಿಸಲು ಸಲ್ಲಿಸಿದ ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.
Vijaya Karnataka Web this idol offender will not be let off lightly
ದೇಯಿ ಬೈದ್ಯೆತಿ ಮೂರ್ತಿಗೆ ಅಪಮಾನ: ಪ್ರಕರಣ ರದ್ದಗೊಳಿಸಲು ಕೋರ್ಟ್ ನಿರಾಕರಣೆ


ಬೈದ್ಯೆತಿ ಮೂರ್ತಿಯನ್ನು ಅಶ್ಲೀಲವಾಗಿ ಮುಟ್ಟಿ ಅವಮಾನ ಮಾಡಿದ್ದ ಆರೋಪಿ ಅಬ್ದುಲ್ ಹನೀಫ್ (29) ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಕೆಯಾಗಿತ್ತು.

ಈ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬುದಿಹಾಳ್ ಆರ್‌ ಬಿ ಅವರು ಇದೊಂದು ಗಂಭೀರ ಪ್ರಕರಣವಾಗಿದೆ. ಆರೋಪಿಯ ವಿರುದ್ಧ ಎಫ್‌ಐಆರ್ ಮಾತ್ರವಲ್ಲದೆ, ಫೋಟೋ ಪುರಾವೆ ಸಹಿತ ದೂರು ದಾಖಲಾಗಿದೆ. ಹೀಗಾಗಿ ಈ ಹಂತದಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಪ್ರಕರಣವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಆರೋಪಿ ಹನೀಫ್ ಪಡುಮಲೆ ಔಷಧಿ ವನದಲ್ಲಿರುವ ಜಾನಪದ ವೀರರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿಯ ಮೂರ್ತಿಯ ಪಕ್ಕದಲ್ಲಿ ಕುಳಿತು ಮೂರ್ತಿಯ ಎದೆಯನ್ನು ಮುಟ್ಟುವಂತಹ ಅಶ್ಲೀಲ ಭಂಗಿಯ ಭಾವಚಿತ್ರ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದ. ದೇಯಿ ಬೈದತಿ ಕರಾವಳಿ ಭಾಗದ ಜಾನಪದ ವೀರರ ತಾಯಿಯಾಗಿದ್ದು, ಪೂಜಿಸಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ