ಆ್ಯಪ್ನಗರ

ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ, ಮೇಲ್ಸೇತುವೆ ಕಾಮಗಾರಿ ವಿಳಂಬ ವಿರುದ್ಧ ಕಾಂಗ್ರೆಸ್‌ ರಸ್ತೆತಡೆ

ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಡಿಸೆಂಬರ್‌ ಅಂತ್ಯದೊಳಗೆ ಮುಗಿಸುತ್ತೇವೆ ಎಂದು ಭರವಸೆ ನೀಡಿರುವ ಸಂಸದರು ನೀಡಿರುವ ಭರವಸೆ ಹುಸಿಯಗಿದ್ದು ಕೊಟ್ಟ ಮಾತನ್ನು ಉಳಿಸಿ ಬಳಿಕ ಚುನಾವಣೆಗೆ ಮತ ಕೇಳಲು ಬನ್ನಿ ಎಂದು ಎಂದು ವಿಧಾನ ಪರಿಷರ್ತ ಸದಸ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಒತ್ತಾಯಿಸಿದರು.

Vijaya Karnataka 31 Jul 2018, 3:15 pm
ತೊಕ್ಕೊಟ್ಟು : ಮೇಲ್ಸೇತುವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಡಿಸೆಂಬರ್‌ ಅಂತ್ಯದೊಳಗೆ ಮುಗಿಸುತ್ತೇವೆ ಎಂದು ಭರವಸೆ ನೀಡಿರುವ ಸಂಸದರು ನೀಡಿರುವ ಭರವಸೆ ಹುಸಿಯಗಿದ್ದು ಕೊಟ್ಟ ಮಾತನ್ನು ಉಳಿಸಿ ಬಳಿಕ ಚುನಾವಣೆಗೆ ಮತ ಕೇಳಲು ಬನ್ನಿ ಎಂದು ಎಂದು ವಿಧಾನ ಪರಿಷರ್ತ ಸದಸ್ಯ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಒತ್ತಾಯಿಸಿದರು.
Vijaya Karnataka Web thokkottu national highway bridge construction delay congress srike
ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ, ಮೇಲ್ಸೇತುವೆ ಕಾಮಗಾರಿ ವಿಳಂಬ ವಿರುದ್ಧ ಕಾಂಗ್ರೆಸ್‌ ರಸ್ತೆತಡೆ


ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬ, ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ತೊಕ್ಕೊಟ್ಟಿನಲ್ಲಿ ಸೋಮವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಆವರು ಮಾತನಾಡಿದರು.

ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಯು.ಟಿ. ಖಾದರ್‌ ಕಾರಣ ಎಂದು ಬಿಜೆಪಿ ಆರೋಪಿಸುತ್ತಿದೆ. ಸಂಸದ, ಶಾಸಕರ ಜವಾಬ್ದಾರಿ ಬಗ್ಗೆ ಅರಿಯದವರು ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದರೆ ಏನಾಗಹುದು ಎನ್ನುವುದನ್ನು ಇಂಹತ ಹೇಳಿಕೆಗಳಿಂದ ತಿಳಿಯಹುದು ಎಂದರು.

ಮೂಡಾದ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌, ಉಳ್ಳಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂತೋಷ್‌ ಶೆಟ್ಟಿ ಅಸೈಗೋಳಿ, ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್‌ ಮೋನು, ಸದಸ್ಯರಾದ ಅಬ್ದುಲ್‌ ಜಬ್ಬಾರ್‌ ಬೋಳಿಯಾರ್‌, ಪದ್ಮಾವತಿ ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ, ಬ್ಲಾP- ಕಾಂಗ್ರೆಸ್‌ ಉಪಾಧ್ಯಕ್ಷ ಸುರೇಶ್‌ ಭಟ್ನಗರ, ಸಂಘಟನಾ ಕಾರ್ಯದರ್ಶಿ ಇಕ್ಬಾಲ್‌ ಸಾಮಾಣಿಗೆ, ಸಲೀಂ ಮೆಗಾ ಅಸೆಙಗೋಳಿ, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಸದಾಶಿವ ಉಳ್ಳಾಲ್‌, ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಉಮ್ಮರ್‌ ಪಜೀರ್‌, ನಗರಸಭಾ ಅಧ್ಯಕ್ಷ ಹುಸೈನ್‌ ಕುಂಞಿಮೋನು, ಸದಸ್ಯರಾದ ದಿನೇಶ್‌ ರೈ, ಬಾಝಿಲ್‌ ಡಿಸೋಜ, ಕೊಣಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಚ್ಚುತ ಗಟ್ಟಿ, ಎಪಿಎಂಸಿ ಉಪಾಧ್ಯಕ್ಷೆ ಮುತ್ತು ಶೆಟ್ಟಿ, ಮುಖಂಡ ಶ್ರೀನಿವಾಸ ಶೆಟ್ಟಿ ಪುಲ್ಲು, ಸುಹಾಸಿನಿ ಉಪಸ್ಥಿತರಿದ್ದರು.
ಬ್ಲಾಕ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ರಹ್ಮಾನ್‌ ಕೋಡಿಜಾಲ್‌ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ