ಆ್ಯಪ್ನಗರ

ಕರಾವಳಿಯಲ್ಲಿ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಕೆಲವೆಡೆ ಮಂಗಳವಾರ ರಾತ್ರಿ ಗುಡುಗು, ಗಾಳಿ ಸಹಿತ ಬೇಸಿಗೆ ಮಳೆ ಸುರಿದಿದ್ದು, ಬಿಸಿಲ ಬೇಗೆಯಲ್ಲಿ ಬೆಂದ ನಗರದ ಜನರಲ್ಲಿ ಹರ್ಷ ಮೂಡಿಸಿದೆ.

ವಿಕ ಸುದ್ದಿಲೋಕ 2 May 2017, 10:14 pm
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಕೆಲವೆಡೆ ಮಂಗಳವಾರ ರಾತ್ರಿ ಗುಡುಗು, ಗಾಳಿ ಸಹಿತ ಬೇಸಿಗೆ ಮಳೆ ಸುರಿದಿದ್ದು, ಬಿಸಿಲ ಬೇಗೆಯಲ್ಲಿ ಬೆಂದ ನಗರದ ಜನರಲ್ಲಿ ಹರ್ಷ ಮೂಡಿಸಿದೆ.
Vijaya Karnataka Web thunder rain in coastal districts
ಕರಾವಳಿಯಲ್ಲಿ ಗುಡುಗು ಸಹಿತ ಮಳೆ


ರಾತ್ರಿ ಸುಮಾರು 8ರ ವೇಳೆಗೆ ಆರಂಭಗೊಂಡ ಗುಡುಗು ಸಹಿತ ಧಾರಾಕಾರ ಮಳೆ, ಜಿಲ್ಲೆಯ ಜನರಲ್ಲಿ ಹರ್ಷೋಲ್ಲಾಸ ಮೂಡಿಸಿದೆ. ಜಿಲ್ಲೆಯ ಕುಂಬ್ರ, ಬಿ.ಸಿ.ರೋಡು, ಬಂಟ್ವಾಳ, ಪುತ್ತೂರು, ಉಳ್ಳಾಲ, ಸುರತ್ಕಲ್‌ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ನಾನಾ ಕಡೆ ಮಳೆಯಾಗುತ್ತಿರುವುದರಿಂದ ಮಂಗಳೂರು ನಗರದ ನೀರಿನ ದಾಹ ಸ್ವಲ್ಪ ಪ್ರಮಾಣದಲ್ಲಿ ತಗ್ಗಿದಂತಾಗಿದೆ. ಇದೇ ರೀತಿ ಒಂದೆರಡು ದಿನ ಮಳೆಯಾದರೆ ತುಂಬೆ ಮತ್ತು ಎಎಂಆರ್‌ ಡ್ಯಾಂಗಳಲ್ಲಿನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿಏರಿಕೆಯಾಗಲಿದೆ.

ಈ ಮಳೆಯಿಂದ ನೀರು, ವಿದ್ಯುತ್‌ ಸಮಸ್ಯೆಯಿಂದ ತೊಂದರೆಯಾಗಿರುವ ಕೃಷಿ ತೋಟಗಳಿಗೂ ಅನುಕೂಲವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ