ಆ್ಯಪ್ನಗರ

Mangaluru Dasara | ಇಂದು ಮಂಗಳೂರಿನಲ್ಲಿ ‘ಪಿಲಿನಲಿಕೆ’ ಅಬ್ಬರ: 7 ನೇ ವರ್ಷದ ಸಂಭ್ರಮ, 12 ತಂಡಗಳು ಭಾಗಿ

ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದ್ದು, ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಲಿದೆ.

Vijaya Karnataka Web 4 Oct 2022, 8:47 am
ಮಂಗಳೂರು: ದಸರಾ ಅಂಗವಾಗಿ ಬೆಳಗ್ಗೆ 10 ಗಂಟೆಯಿಂದ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ‘ಪಿಲಿ ನಲಿಕೆ-7’ (ಹುಲಿವೇಷ) ಕುಣಿತ ಸ್ಪರ್ಧೆ ಜರುಗಲಿದೆ. 2014ರಿಂದ ಪ್ರಾರಂಭಗೊಂಡಿರುವ ಈ ಕಾರ್ಯಕ್ರಮ ನಮ್ಮ ಟಿವಿಯ ಸಹಯೋಗದಲ್ಲಿ ತುಳುನಾಡಿನ ಅದ್ಭುತ ಕಲಾ ಪರಂಪರೆಯನ್ನು ಊರಾಗಲ ಪಸರಿಸುವ ಉದ್ದೇಶ ಹೊಂದಿದ್ದೇವೆ ಎಂದು ಪಿಲಿನಲಿಕೆ ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
Vijaya Karnataka Web ಹುಲಿ ವೇಷ ನರ್ತನ


“ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳೆಸುವ ನಿಟ್ಟಿನಲ್ಲಿ ಆರಂಭಿಸಿದ ಪಿಲಿನಲಿಕೆ ಸ್ಪರ್ಧೆ ಯಶಸ್ವಿಯಾಗಿ 6 ಆವೃತ್ತಿಗಳನ್ನು ಪೂರೈಸಿದ್ದು, ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಅದನ್ನು ಮುಂದುವರೆಸಲು ಅಸಾಧ್ಯವಾಗಿತ್ತು. ಇದೀಗ ಪಿಲಿನಲಿಕೆ-7 ಸ್ಪರ್ಧಾಕಣದಲ್ಲಿ ತುಳುನಾಡಿನ ಪ್ರತಿಷ್ಠಿತ ಮತ್ತು ಆಹ್ವಾನಿತ 12 ತಂಡಗಳು ಭಾಗವಹಿಸಲಿದ್ದು, ಬಹುಮಾನ ರೂಪದಲ್ಲಿ ಪ್ರಥಮ ರೂ.3,00,000 ಮತ್ತು ಫಲಕ, ದ್ವಿತೀಯ ರೂ.2,00,000 ಮತ್ತು ಫಲಕ, ತೃತೀಯ ರೂ.1,00,000 ಮತ್ತು ಫಲಕ ಹಾಗೂ ವೈಯಕ್ತಿಕ ವಿಭಾಗದಲ್ಲಿ ಅತ್ಯುತ್ತಮ ಮರಿಹುಲಿ, ಕರಿಹುಲಿ, ಮುಡಿ ಹಾರಿಸುವುದು, ತಾಸೆ, ಬಣ್ಣಗಾರಿಕೆ, ಅತ್ಯುತ್ತಮ ಹುಲಿ ಕುಣಿತಕ್ಕೆ ತಲಾ ರೂ. 50,000/- ನಗದು ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ತಂಡಕ್ಕೂ ರೂ.50,000 ಅನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುವುದು” ಎಂದರು.

Mangaluru Dasara | ಪುತ್ತೂರಿನಲ್ಲಿ ನವರಾತ್ರಿ ವೈಭವದ ಉತ್ತುಂಗ: ಇಂದು ಮಹಾನವಮಿ, ನಾಳೆ ವಿಜಯದಶಮಿ ಸಂಭ್ರಮ
ಪತ್ರಿಕಾಗೋಷ್ಟಿಯಲ್ಲಿ ನಮ್ಮ ಟಿವಿ ಆಡಳಿತ ನಿರ್ದೇಶಕ ಶಿವಶರಣ್ ಶೆಟ್ಟಿ, ನವೀನ್ ಶೆಟ್ಟಿ ಎಡ್ಮೆಮಾರ್ ಉಪಸ್ಥಿತರಿದ್ದರು.

ತಾರಾ ಆಕರ್ಷಣೆ:

ಪಿಲಿನಲಿಕೆ-7 ಕಾರ್ಯಕ್ರಮಕ್ಕೆ ಬಾಲಿವುಡ್‌ ಖ್ಯಾತ ತಾರೆಯರಾದ ಸುನಿಲ್ ಶೆಟ್ಟಿ, ಪೂಜಾ ಹೆಗ್ಡೆ ಹಾಗೂ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಸೇರಿದಂತೆ ಹಲವಾರು ನಟ-ನಟಿಯರು, ತುಳು ರಂಗಭೂಮಿಯ ಹೆಸರಾಂತ ಕಲಾವಿದರು ತಾರಾ ಮೆರುಗನ್ನು ನೀಡಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ