ಆ್ಯಪ್ನಗರ

Tulu language | ತುಳು ಭಾಷೆಗೆ ಶೀಘ್ರ ಸಾಂವಿಧಾನಿಕ ಮಾನ್ಯತೆ: ಸುನಿಲ್‌ ಕುಮಾರ್‌ ಭರವಸೆ

Tulu language: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವ ನಿಟ್ಟಿನಲ್ಲಿ ರಾಜ್ಯದ ಶಿಫಾರಸು ಕೇಂದ್ರಕ್ಕೆ ಸಲ್ಲಿಕೆಯಾಗಿದ್ದು, ಗೃಹ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಶೀಘ್ರವೇ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ (official language) ಲಭಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ (V Sunil Kumar) ಹೇಳಿದರು. ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2021ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭ, ವಿಶೇಷ ಸಾಧಕರಿಗೆ ರಾಜ್ಯ ಪುರಸ್ಕಾರ ಪ್ರದಾನ ನೆರವೇರಿಸಿ ಮಾತನಾಡಿದರು.

Edited byಹೇಮಂತ್ ಕುಮಾರ್ ಎಸ್ | Vijaya Karnataka 24 Sep 2022, 10:23 pm

ಹೈಲೈಟ್ಸ್‌:


  • ಬೇರೆ ಬೇರೆ ಭಾಷೆಗಳು ಈ ನಿಟ್ಟಿನಲ್ಲಿ ಪಟ್ಟಿಯಲ್ಲಿವೆ
  • ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ‍್ಯಕ್ರಮ
  • ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ ಭರವಸೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Tulu Academy
ತುಳು ಸಾಹಿತ್ಯ ಅಕಾಡೆಮಿ
ಮಂಗಳೂರು: ತುಳು ಭಾಷೆಯನ್ನು (Tulu language) ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರಿಸುವ ನಿಟ್ಟಿನಲ್ಲಿ ರಾಜ್ಯದ ಶಿಫಾರಸು ಕೇಂದ್ರಕ್ಕೆ ಸಲ್ಲಿಕೆಯಾಗಿದ್ದು, ಗೃಹ ಸಚಿವರಿಗೂ ಮನವರಿಕೆ ಮಾಡಲಾಗಿದೆ. ಶೀಘ್ರವೇ ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ ಲಭಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಇಂಧನ ಹಾಗೂ ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್‌ (V Sunil Kumar) ಹೇಳಿದರು.
ನಗರದ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ಶನಿವಾರ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ 2021ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭ, ವಿಶೇಷ ಸಾಧಕರಿಗೆ ರಾಜ್ಯ ಪುರಸ್ಕಾರ ಪ್ರದಾನ ನೆರವೇರಿಸಿ ಮಾತನಾಡಿದರು.
ತುಳು ಪಠ್ಯಕ್ಕೆ ಅಳಿವು-ಉಳಿವು ಪ್ರಶ್ನೆ: ಅತಿಥಿ ಶಿಕ್ಷಕರ ಕೈ ಸೇರುತ್ತಿಲ್ಲ ಮಾಸಿಕ ಸಂಭಾವನೆ
ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವುದು ಸುಲಭದ ಕಾರ್ಯವಲ್ಲ. ಬೇರೆ ಬೇರೆ ಭಾಷೆಗಳು ಈ ನಿಟ್ಟಿನಲ್ಲಿ ಪಟ್ಟಿಯಲ್ಲಿವೆ. ಇದೀಗ ಒಟ್ಟಾಗಿ ಕೇಂದ್ರ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ. ಶೀಘ್ರ ಇದಕ್ಕೆ ಉತ್ತರ ದೊರೆಯಲಿದೆ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ತುಳು ಭಾಷೆಯ ಬೆಳವಣಿಗೆಗಾಗಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಉತ್ತಮ ಅನುದಾನ ಹಾಗೂ ಸಹಕಾರ ನೀಡಿದ್ದಾರೆ. ಸುಸಜ್ಜಿತ ತುಳುಭವನ ಸಾಕಾರವಾಗುತ್ತಿದೆ ಎಂದರು.
PM Modi in Mangaluru | ಇಂದು ಕರಾವಳಿಗೆ 'ನಮೋ' ಭೇಟಿ: ತುಳು ಭಾಷೆ ಮಾನ್ಯತೆಗೆ 50 ಸಾವಿರಕ್ಕೂ ಅಧಿಕ ಟ್ವೀಟ್‌
ಗೌರವ ಪ್ರಶಸ್ತಿ ಪ್ರದಾನ

2021ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಸಂಜೀವ ಬಂಗೇರ ತಲಪಾಡಿ(ತುಳು ಜಾನಪದ ಕ್ಷೇತ್ರ), ಕೃಷ್ಣಪ್ಪ ಉಪ್ಪೂರು(ತುಳು ನಾಟಕ/ ಸಿನಿಮಾ ಕ್ಷೇತ್ರ), ಉಲ್ಲಾಸ ಕೃಷ್ಣ ಪೈ ಪುತ್ತೂರು(ತುಳು ಸಾಹಿತ್ಯ ವಿಭಾಗ) ಅವರಿಗೆ ಪ್ರದಾನ ಮಾಡಲಾಯಿತು.

ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಯೋಗೀಶ್‌ ಕಾಂಚನ್‌ ಬೈಕಂಪಾಡಿ (ತುಳು ಕವನ ವಿಭಾಗ), ಅಕ್ಷತಾರಾಜ್‌ ಪೆರ್ಲ(ತುಳು ನಾಟಕ ವಿಭಾಗ), ಡಾ. ಅಶೋಕ ಆಳ್ವ ಸುರತ್ಕಲ್‌(ಅಧ್ಯಯನ ವಿಭಾಗ), ವಿಶೇಷ ಯುವ ಸಾಧಕ ರಾಜ್ಯ ಪುರಸ್ಕಾರವನ್ನು ಹರಿಪ್ರಸಾದ್‌ ನಂದಳಿಕೆ, ಚಿನ್ಮಯ್‌ ಮೋಹನ್‌ ಸಾಲಿಯಾನ್‌ ಮುಂಬಯಿ, ರಮಾನಂದ ಶೆಟ್ಟಿ ಒಮಾನ್‌(ಹೊರ ರಾಷ್ಟ್ರ) ಅವರಿಗೆ ನೀಡಲಾಯಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ತುಳು ಭವನಕ್ಕೆ ₹3.60 ಕೋಟಿ ಬಿಡುಗಡೆ
ವಿಶೇಷ ಬಾಲಪ್ರತಿಭಾ ರಾಜ್ಯ ಪುರಸ್ಕಾರವನ್ನು ನಿರೀಕ್ಷಾ ಕೋಟ್ಯಾನ್‌ ಕೋಡಿಕೆರೆ, ಜೀವಿಕಾ ಶೆಟ್ಟಿ ಮುಂಬಯಿ, ಸಾನ್ವಿ ಯುಎಸ್‌ಎ(ಹೊರರಾಷ್ಟ್ರ), ವಿಶೇಷ ರಾಜ್ಯ ಮಾಧ್ಯಮ ಪುರಸ್ಕಾರವನ್ನು ಶಶಿ ಬಂಡಿಮಾರ್‌, ರೋನ್ಸ್‌ ಬಂಟ್ವಾಳ(ಹೊರ ರಾಜ್ಯ), ವಿಶೇಷ ಸಂಘಟನಾ ರಾಜ್ಯ ಪುರಸ್ಕಾರವನ್ನು ಜೈ ತುಳುನಾಡ್‌, ತುಳು ಕೂಟ ಫೌಂಡೇಶನ್‌ ನಾಲಸೋಪಾರ ಮುಂಬಯಿ, ತುಳು ಕೂಟ ಕತಾರ್‌ (ಹೊರ ರಾಷ್ಟ್ರ)ಗೆ ಪ್ರದಾನ ಮಾಡಲಾಯಿತು.
ತುಳುವಿಗೆ ಅಕಾಡೆಮಿಯೊಂದನ್ನು ಬಿಟ್ಟರೆ ಸರಕಾರ ಬೇರೆ ಏನೂ ಮಾಡಿಲ್ಲ: ತುಳು ಅಕಾಡೆಮಿ ಅಧ್ಯಕ್ಷ ಬೇಸರ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಉಮಾನಾಥ ಕೋಟ್ಯಾನ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಆಳ್ವಾಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ, ಅದಾನಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಕಿಶೋರ್‌ ಆಳ್ವ, ಪ್ರಮುಖರಾದ ಸರ್ವೋತ್ತಮ ಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕರಾದ ರಾಜೇಶ್‌ ಜಿ., ಪೂರ್ಣಿಮಾ, ತುಳು ಅಕಾಡೆಮಿ ರಿಜಿಸ್ಟ್ರಾರ್‌ ಕವಿತಾ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಮಲ್ಲಿಕಾ ಶೆಟ್ಟಿ ಸಿದ್ಧಕಟ್ಟೆ, ಕಡಬ ದಿನೇಶ್‌ ರೈ ಕಾರ್ಯಕ್ರಮ ನಿರೂಪಿಸಿದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ