ಆ್ಯಪ್ನಗರ

ಪುತ್ತೂರಿನಲ್ಲಿ ದ್ವಿಚಕ್ರಕ್ಕೆ ಅಡ್ಡ ಬಂದ ಶ್ವಾನ..! ವಾಹನ ಪಲ್ಟಿಯಾಗಿ ಹಿಂಬದಿ ಸವಾರ ಸಾವು..!

ಹಿರಿಯ ಮಗಳಿಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಿತಾರ್ಥ ನಡೆದಿತ್ತು. ಮುಂದಿನ ತಿಂಗಳು 28ರಂದು ಮದುವೆಗೆ ದಿನಾಂಕ ನಿಗದಿಯಾಗಿದ್ದು, ಅವರು ಮಗಳ ಮದುವೆ ಕಾರ್ಯಕ್ರಮದ ತಯಾರಿಯ ಸಿದ್ದತೆಯಲ್ಲಿದ್ದರು. ಇದೀಗ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

Vijaya Karnataka Web 24 Aug 2020, 5:28 pm
ಪುತ್ತೂರು: ದ್ವಿಚಕ್ರದಲ್ಲಿ ಚಲಿಸುತ್ತಿದ್ದ ವೇಳೆ ನಾಯಿಯೊಂದು ಅಡ್ಡ ಬಂದ ಪರಿಣಾಮ ವಾಹನ ಪಲ್ಟಿಯಾಗಿ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಪುತ್ತೂರು ತಾಲೂಕಿನ ಕೌಡಿಚ್ಚಾರು ಸಮೀಪ ನಡೆದಿದೆ.
Vijaya Karnataka Web Accident


ಕೆ.ಎಸ್‌. ಹೆಗ್ಡೆ ಆಸ್ಪತ್ರೆಯಲ್ಲಿ ಕರಾವಳಿಯ ಮೊಟ್ಟಮೊದಲ ಪ್ಲಾಸ್ಮಾ ಥೆರಪಿ ಘಟಕ ಸ್ಥಾಪನೆ

ಮಾಡ್ನೂರು ಗ್ರಾಮದ ಸಸ್ಪೇಟಿ ರಾಮ ನಾಯ್ಕ ಅವರ ಪುತ್ರ ಕೃಷ್ಣಪ್ಪ ನಾಯ್ಕ(53) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರು ತನ್ನ ಮಗಳ ಜೊತೆ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮಾಣಿ-ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಮಧ್ಯಾಹ್ನ ನಾಯಿ ಅಡ್ಡ ಬಂದ ಕಾರಣ ದ್ವಿಚಕ್ರ ವಾಹನ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟಿದ್ದಾರೆ.

ಬೆಳ್ತಂಗಡಿಯಲ್ಲಿ ಬೆಳ್ಳಂಬೆಳಗ್ಗೆ ತಲವಾರು ದಾಳಿ..! ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಸಾವು..! ಮಗನ ಮೇಲೆಯೇ ಅನುಮಾನ..!

ಮೇಸ್ತ್ರಿ ಕೆಲಸ ಮಾಡುತ್ತಿರುವ ಕೃಷ್ಣಪ್ಪ ನಾಯ್ಕ ಸಾವನ್ನಪ್ಪಿದರೆ, ಸವಾರೆ ಸುನೀತಾ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ತೆರಳಿದ್ದಾರೆ. ವಾಹನ ಪಲ್ಟಿಯಾದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಕೃಷ್ಣಪ್ಪ ನಾಯ್ಕರವರ ತಲೆಗೆ ತೀವ್ರ ಗಾಯಗಳಾಗಿದ್ದು, ಕೂಡಲೇ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ..!

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತ ಕೃಷ್ಣಪ್ಪ ನಾಯ್ಕ ಅವರಿಗೆ ಮೂವರು ಪುತ್ರಿಯರು. ಈ ಪೈಕಿ ಹಿರಿಯ ಮಗಳಿಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆ ನಿಶ್ಚಿತಾರ್ಥ ನಡೆದಿತ್ತು. ಮುಂದಿನ ತಿಂಗಳು 28ರಂದು ಮದುವೆಗೆ ದಿನಾಂಕ ನಿಗದಿಯಾಗಿದ್ದು, ಅವರು ಮಗಳ ಮದುವೆ ಕಾರ್ಯಕ್ರಮದ ತಯಾರಿಯ ಸಿದ್ದತೆಯಲ್ಲಿದ್ದರು. ಇದೀಗ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ