ಆ್ಯಪ್ನಗರ

ಉಜಿರೆಯಲ್ಲಿ ಬಾಲಕನ ಅಪಹರಣ: ಬೇಡಿಕೆಯ ಹಣದ ಮೊತ್ತ ಇಳಿಸಿದ ಅಪಹರಣಕಾರರು!

ಬೆಳ್ತಂಗಡಿ ತಾಲೂಕಿನ ಉಜಿರೆಯ ಉದ್ಯಮಿ ಬಿಜೋಯ್ ಎಂಬವರ ಮಗ, ಬಾಲಕ ಅನುಭವ್ ಅವರ ಅಪಹರಣ ಪ್ರಕರಣ ಈಗ ಹೊಸ ತಿರುವು ಪಡೆದಿದೆ. 17 ಕೋಟಿ ಬೇಡಿಕೆ ಇಟ್ಟಿದ್ದ ಅಪಹರಣಕಾರರು ಈಗ 10 ಕೋಟಿಗೆ ಬೇಡಿಕೆಯನ್ನು ಇಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Vijaya Karnataka Web 18 Dec 2020, 3:33 pm
ಮುಂಡಾಜೆ: ಉಜಿರೆ ರಥಬೀದಿ ಸಮೀಪ ಗುರುವಾರ ಸಂಜೆ ವೇಳೆ ಆಟವಾಡುತ್ತಿದ್ದ ಎಂಟರ ಹರೆಯದ ಬಾಲಕನನ್ನು ಕಾರಿನಲ್ಲಿ ಬಂದಿದ್ದ ತಂಡವೊಂದು ಸಿನಿಮೀಯ ರೀತಿಯಲ್ಲಿ ಅಪಹರಿಸಿದೆ.
Vijaya Karnataka Web ಉಜಿರೆಯಲ್ಲಿ ಬಾಲಕನ ಅಪಹರಣ


ಅಪಹರಣದ ನಂತರ ಬಿಜೋಯ್ ಅವರ ಮಡದಿಗೆ ಅಪಹರಣಕಾರರು ಕರೆ ಮಾಡಿ 17ಕೋಟಿ ಕೇಳಿದ್ದರು. ಈಗ ಘಟನೆಗೆ ಮತ್ತೆ ತಿರುವು ದೊರೆತಿದ್ದು, ಹಿಂದೆ 17 ಕೋಟಿ ಬೇಡಿಕೆ ಇಟ್ಟಿದ್ದ ಅಪಹರಣಕಾರರು ಈಗ 10 ಕೋಟಿಗೆ ಬೇಡಿಕೆಯನ್ನು ಇಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆ ವಿವರ

ಅಪಹರಣಕ್ಕೊಳಗಾದ ಬಾಲಕ ಉಜಿರೆ ಉದ್ಯಮಿ ಬಿಜೋಯ್ ಅವರ ಪುತ್ರ. ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಅಪರಿಚಿತ ತಂಡ ಕಾರಿನಲ್ಲಿ ಬಂದು ಅಪಹರಿಸಿದ್ದಾರೆ. ಘಟನೆ ನಡೆದ ತಕ್ಷಣ ಹಳದಿ ನಂಬರ್‌ ಪ್ಲೇಟ್‌ ಹೊಂದಿದ ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಬಾಲಕನನ್ನು ಅಪಹರಿಸಲಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣ ಹರಿದಾಡುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಲ್ಲದೆ ತಾವೂ ಹುಡುಕಾಟ ನಡೆಸಿದ್ದರು.
ನಾಮಪತ್ರ ವಾಪಸ್‌ ಪಡೆಯಲು ಬಂದಿದ್ದ ಮಹಿಳೆ ಪೊಲೀಸರ ಮುಂದೆಯೇ ಅಪಹರಣ..!

ಬಿಳಿ ಇಂಡಿಕಾ ಕಾರಿನಲ್ಲಿ ನಾಲ್ವರು ಮನೆ ಮುಂದೆ 10 ನಿಮಿಷದಿಂದ ನಿಂತಿರುವುದನ್ನು ಮನೆ ಮಂದಿ ಗಮನಿಸಿದ್ದರು. ಬಳಿಕ ಸಂಜೆ 6.30ರ ಸುಮಾರಿಗೆ ಅಪಹರಣ ನಡೆಸಿ ಚಾರ್ಮಾಡಿ ಅಥವಾ ಧರ್ಮಸ್ಥಳ ಮಾರ್ಗವಾಗಿ ಸಂಚರಿಸಿರುವ ಅನುಮಾನ ವ್ಯಕ್ತವಾಗಿದೆ. ಅಪಹರಣಕಾರರ ಕರೆ ಬಂದಿದ್ದು, ಹಿಂದಿಯಲ್ಲಿ ವ್ಯವಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ.

ಬಾಲಕನ ಮನೆಯವರು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್‌ ಡಿಸೋಜ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ಸಂದೇಶ್‌ ಪಿ.ಜಿ., ಉಪನಿರೀಕ್ಷಕ ನಂದಕುಮಾರ್‌, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್‌ ಕುಮಾರ್‌ ತಂಡ ರಚಿಸಿ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ