ಆ್ಯಪ್ನಗರ

ಕೇಂದ್ರ ಸರಕಾರವೇ ಗೋ ಹತ್ಯೆ ನಿಷೇಧ ಕಾನೂನು ರೂಪಿಸಲಿ: ಯುಟಿ ಖಾದರ್‌

ಅಕ್ರಮ ಗೋ ಸಾಗಾಟ ಪ್ರಕರಣಗಳು ಕೆಲವೊಮ್ಮೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಅಕ್ರಮವಾಗೊ ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುವುದು ಸರಿಯಲ್ಲ ಎಂದರು.

Vijaya Karnataka Web 24 Jun 2019, 8:35 pm
ಮಂಗಳೂರು: ಮಳೆಗಾಲ ಆರಂಭವಾದ ಹಿನ್ನೆಲೆಯಲ್ಲಿ ಎಲ್ಲೆಡೆ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿದೆ. ಮಂಗಳೂರಿನ ಗೋರಕ್ಷಕ ದಂಡು ಹಾಗೂ ಅರೆಕೆರೆಬೈಲಿನಲ್ಲಿ ಡೆಂಗೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ತಕ್ಷಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ರೋಗ ಉಲ್ಭಣಿಸದಂತೆ ಕ್ರಮ ವಹಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
Vijaya Karnataka Web ಯುಟಿ ಖಾದರ್‌
ಯುಟಿ ಖಾದರ್‌


ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಕೇಂದ್ರವೇ ಗೋಹತ್ಯೆ ನಿಷೇಧ ಕಾನೂನು ರೂಪಿಸಲಿ

ಅಕ್ರಮ ಗೋ ಸಾಗಾಟ ಪ್ರಕರಣಗಳು ಕೆಲವೊಮ್ಮೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಅಕ್ರಮವಾಗೊ ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುವುದು ಸರಿಯಲ್ಲ ಎಂದರು.

ಗೋ ಹತ್ಯೆಗೆ ಸಂಬಂಧಿಸಿದಂತೆ 1964 ಕಾಯಿದೆ ಪ್ರಕಾರ ಯಾವೆಲ್ಲ ರೀತಿಯಲ್ಲಿ ಅವಕಾಶ ಇದೆಯೋ ಅದೇ ರೀತಿಯಲ್ಲಿ ಸಾರ್ವಜನಿಕರು ನಡೆದುಕೊಳ್ಳಬೇಕು. ಆದರೆ ಸಂಪೂರ್ಣ ಗೋ ಹತ್ಯೆ ನಿಷೇಧ ಮಾಡಲು ಕೇಂದ್ರ ಸರಕಾರಕ್ಕೆ ಅವಕಾಶ ಇದೆ. ಕೇಂದ್ರ ಸರಕಾರವೇ ಈ ಬಗ್ಗೆ ಕಾನೂನು ರೂಪಿಸಲಿ. ದೇಶ ಕಾನೂನಿನ ಅಡಿಯಲ್ಲಿ ನಡೆಯಬೇಕೆ ವಿನಃ ಭಯ, ಶಕ್ತಿಯಿಂದ ಅಲ್ಲ ಎಂದು ಸಚಿವ ಖಾದರ್ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ