ಆ್ಯಪ್ನಗರ

ಜ.16ರಂದು ಪುತ್ತೂರಿನಲ್ಲಿ ಕೊರೊನಾ ಲಸಿಕೆ ವಿತರಣೆ, ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್‌!

ಮೊದಲ ಹಂತದಲ್ಲಿಆರೋಗ್ಯ ಕಾರ್ಯಕರ್ತೆಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮುಂಚೂಣಿಯ ಕೊರೊನಾ ಯೋಧರಿಗೆ ಲಸಿಕೆ ವಿತರಿಸಲಾಗುವುದು. ಈ ಸಂಬಂಧ ಈಗಾಗಲೇ 2,181 ಮಂದಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಅವರಿಗೆ ಎರಡು ಹಂತದ ಡೋಸ್‌ ನೀಡಲಾಗುವುದು ಎಂದರು.

Vijaya Karnataka Web 14 Jan 2021, 7:42 am
ಪುತ್ತೂರು: ಕೊರೊನಾ ನಿಗ್ರಹಕ್ಕಾಗಿ ಬಿಡುಗಡೆಗೊಂಡಿರುವ ಕೋವಿಶೀಲ್ಡ್‌ ಲಸಿಕೆಯನ್ನು ಜ.16ರಂದು ಪುತ್ತೂರು ಮತ್ತು ಕಡಬ ತಾಲೂಕಿಗೆ ವಿತರಿಸಲಾಗುತ್ತದೆ ಎಂದು ಪುತ್ತೂರು ತಾಲೂಕು ವೈದ್ಯಾಧಿಕಾರಿ ಡಾ. ಅಶೋಕ್‌ ಕುಮಾರ್‌ ರೈ ತಿಳಿಸಿದ್ದಾರೆ. ಕಡಬ ಮತ್ತು ಪುತ್ತೂರಿಗೆ ಸಂಬಂಧಿಸಿ ಪುತ್ತೂರು ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ವಿತರಣಾ ಕೇಂದ್ರ ತೆರೆಯಲಾಗುತ್ತದೆ.
Vijaya Karnataka Web covishield--pti


ಮೊದಲ ಹಂತದಲ್ಲಿಆರೋಗ್ಯ ಕಾರ್ಯಕರ್ತೆಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮುಂಚೂಣಿಯ ಕೊರೊನಾ ಯೋಧರಿಗೆ ಲಸಿಕೆ ವಿತರಿಸಲಾಗುವುದು. ಈ ಸಂಬಂಧ ಈಗಾಗಲೇ 2,181 ಮಂದಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ. ಅವರಿಗೆ ಎರಡು ಹಂತದ ಡೋಸ್‌ ನೀಡಲಾಗುವುದು ಎಂದರು.

ಈಗಾಗಲೇ ಪುಣೆಯ ಸೇರಂ ಇನ್ಸ್ಟಿಟ್ಯೂಟ್‌ನಿಂದ ಕೊರೊನಾ ಲಸಿಕೆ ರಾಜ್ಯಕ್ಕೆ ವಿಮಾನ ಮೂಲಕ ತರಲಾಗಿದೆ. ಇದನ್ನು ಕೋಲ್ಡ್‌ ಸ್ಟೋರೇಜ್‌ನಲ್ಲಿ ಇಡಲಾಗಿದೆ. ಜನವರಿ 16ರಿಂದ ಕೊರೊನಾ ಲಸಿಕೆ ನೀಡುವ ಅಭಿಯಾನ ಆರಂಭವಾಗಲಿದೆ ದೇಶದ ಮೂಲೆ ಮೂಲೆಯಲ್ಲೂ ಈ ಅಭಿಯಾನ ನಡೆಯಲಿದೆ.

ಸೋತು ಗೆದ್ದ ಸೋಲಿಲ್ಲದ ಸರದಾರ ಅಂಗಾರ, ಸುಳ್ಯದ ಬಂಗಾರ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ