ಆ್ಯಪ್ನಗರ

ಕಸ್ತೂರಿ ರಂಗನ್‌ ವರದಿ ಅನುಷ್ಠಾನ ವಿರೋಧಿಸಿ ವಾಹನ ಜಾಥಾ

ಕಸ್ತೂರಿ ರಂಗನ್‌ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬಲ್ಯ ಗ್ರಾಮವನ್ನು ಕೈಬಿಡಬೇಕೆಂದು ಅಗ್ರಹಿಸಿ ಗ್ರಾಮಸ್ಥರು ವಾಹನ ಜಾಥಾದೊಂದಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು.

Vijaya Karnataka Web 18 Nov 2020, 6:38 pm
ಕಡಬ: ಕಸ್ತೂರಿ ರಂಗನ್‌ ವರದಿ ಪರಿಸರ ಸೂಕ್ಷ್ಮ ವಲಯ ಎಂಬ ಯೋಜನೆಯಿಂದ ಬಲ್ಯ ಗ್ರಾಮವನ್ನು ಕೈಬಿಡಬೇಕೆಂದು ಅಗ್ರಹಿಸಿ ಗ್ರಾಮಸ್ಥರು ವಾಹನ ಜಾಥಾದೊಂದಿಗೆ ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಯೋಜನೆಯನ್ನು ಕೈಬಿಡುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಯಿತು.
Vijaya Karnataka Web kasthuri rangan report


ಮಲೆನಾಡು ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆದು ಗ್ರಾ.ಪಂ. ಆಡಳಿತಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು. ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಧನಂಜಯ ಗೌಡ ಕೊಡಂಗೆ, ಜಿಲ್ಲಾ ಪರಿಷತ್‌ ಮಾಜಿ ಸದಸ್ಯ ಸಯ್ಯದ್‌ ಮೀರಾ ಸಾಹೇಬ್‌, ಕುಟ್ರುಪ್ಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ದೇವಯ್ಯ ಗೌಡ ಪನ್ಯಾಡಿ ಮತ್ತಿತರರು ಮಾತನಾಡಿ, ಕಸ್ತೂರಿ ರಂಗನ್‌ ವರದಿಯ ಪ್ರಕಾರ ದ.ಕ ಜಿಲ್ಲೆಯ ಸುಳ್ಯ, ಕಡಬ, ಬೆಳ್ತಂಗಡಿ, ತಾಲೂಕಿನ 46 ಗ್ರಾಮಗಳು ಪಶ್ಚಿಮ ಘಟ್ಟ ಅತಿ ಸೂಕ್ಷ್ಮ ಪರಿಸರ ಪ್ರದೇಶವಾಗಿದೆ. ಈ ಭಾಗದ ಜನರು ತಲತಲಾಂತರದಿಂದ ತಮ್ಮ ಜೀವನಾಡಿಯಾದ ಕೃಷಿಯನ್ನು ಕುಲಕಸುಬನ್ನಾಗಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಯೋಜನೆ ಜಾರಿಯಾದರೆ ರೈತರ ಜೀವನ ಬೀದಿಪಾಲಾಗಲಿದೆ. ಇದರಲ್ಲಿ ಬಲ್ಯ ಗ್ರಾಮ ಕೂಡ ಒಳಪಟ್ಟಿದ್ದು ಈ ಹಿನ್ನೆಯಲ್ಲಿ ಬಲ್ಯ ಗ್ರಾಮದ ಜನ ಈಗ ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಭಾವ್ಯ ಸಂತ್ರಸ್ತ ಗ್ರಾಮಗಳಲ್ಲಿ ಹೋರಾಟ ಆಯೋಜಿಸಿ ಬಳಿಕ ಕಡಬದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಮಲೆನಾಡಿಗೆ ಕಸ್ತೂರಿ ಕಂಟಕ: 1576 ಗ್ರಾಮಗಳ ಸಭೆ ನಿರ್ಣಯಕ್ಕೆ ಕಿಮ್ಮತ್ತು ಕೊಡದ ಕೇಂದ್ರ!

ಪ್ರಮುಖರಾದ ಸತೀಶ್ಚಂದ್ರ ಶೆಟ್ಟಿ, ಕೃಷ್ಣಪ್ಪ ದೇವಾಡಿಗ, ತನಿಯ ಸಂಪಡ್ಕ, ಶಿಜೋ ವರ್ಗೀಸ್‌, ಶೇಖರ ಗೌಡ ದೇರಾಜೆ, ಸುಧೀರ್‌ ದೇವಾಡಿಗ, ಚಂದ್ರಶೇಖರ ಮರ್ಧಾಳ, ಉಮೇಶ್‌ ಬಂಗೇರ, ಭಾಸ್ಕರ ಪೂಜಾರಿ, ಅಚ್ಚುತ ಗೌಡ ದೇರಾಜೆ, ಟಿ.ಕೆ. ಕುರಿಯನ್‌, ದೇವರಾಜ್‌ ಬಾರೆತ್ತಡಿ, ಸುಬ್ರಹ್ಮಣ್ಯ ಪ್ರಸಾದ್‌, ಮೋಹನ್‌ ಗೌಡ ದೇರಾಜೆ, ಚಂದ್ರಹಾಸ ಸಾಲಿಯಾನ್‌ ಮತ್ತಿತರರು ಭಾಗವಹಿಸಿದ್ದರು. ಮಹಮ್ಮದಾಲಿ ವಂದಿಸಿದರು.

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ರಾಜ್ಯ ಸರಕಾರದ ಆಕ್ಷೇಪ: ಕೇಂದ್ರಕ್ಕೆ ಪತ್ರ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ